Advertisement
MIRROR FOCUS

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

Share

ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.  ಇದೇ ಸಂದರ್ಭ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲೆಯ ಪ್ರೋತ್ಸಾಹದ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯುತ್ತಿದೆ. ಇದೇ ಸಂದರ್ಭ ಒಬ್ಬ  ಕಲಾವಿದರನ್ನು ಗುರುತಿಸಿ, ಗೌರವಿಸುವ ಕಾರ್ಯಕ್ರಮವೂ ನಡೆಯುತ್ತಿದೆ. ಈ  ಬಾರಿ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರನ್ನು ಗೌರವಿಸಲಾಗುತ್ತಿದೆ.

ಉಬರಡ್ಕ ಉಮೇಶ್‌ ಶೆಟ್ಟಿ ಅವರು ದಿ, ಕುರಿಯ ವಿಠಲ ಶಾಸ್ತ್ರೀ ಮತ್ತು ದಿ, ಪಡ್ರೆ ಚಂದು ಅವರಿಂದ ಯಕ್ಷಗಾನ ಕಲೆಯನ್ನು ಅಭ್ಯಸಿಸಿದ್ದರು. ಧರ್ಮಸ್ಥಳ ಲಲಿತಾ ಕಲಾಕೇಂದ್ರದ ಮೊದಲನೇ ವರ್ಷದ ವಿದ್ಯಾರ್ಥಿಯಾಗಿರುವ ಉಮೇಶ್‌ ಶೆಟ್ಟಿ ಅವರು 1972ರಲ್ಲಿ ಶ್ರೀ ಧರ್ಮಸ್ಥಳ ಮೇಳ ಮೂಲಕ ಕಲಾಸೇವೆ ಆರಂಭಿಸಿ 2015 ರ ವರೆಗೆ ಅಂದರೆ ಸುಮಾರು 44 ವರ್ಷ ಕಲಾಸೇವೆ ನಡೆಸಿದ್ದಾರೆ. ಸದ್ಯ ಶ್ರೀ ಹನುಮಗಿರಿ ಮೇಳದಲ್ಲಿ ಅತಿಥಿ ಕಲಾವಿದ.

ತನ್ನ ಸೋದರ ಮಾವನವರಾದ ದಿ. ಅಳಿಕೆ ರಾಮಯ್ಯ ರೈ ಅವರ ಪ್ರೇರಣೆಯಂತೆ ಯಕ್ಷಗಾನಕ್ಕೆ ಪಾದಾರ್ಪಣೆ ಮಾಡಿರುವ ಉಮೇಶ್‌ ಶೆಟ್ಟಿ ಅವರು, ಕಡತೋಕ ಭಾಗವತರು ಮತ್ತು ಚಿಪ್ಪಾರು ಬಲ್ಲಾಳರ  ಮಾರ್ಗದರ್ಶನದಲ್ಲಿ ಅಣ್ಣಪ್ಪ, ಕಂಸ, ಹಿರಣ್ಯಕಶ್ಯಪ, ದ್ರೋಣ, ಅತಿಕಾಯ, ಹನೂಮಂತ ಮೊದಲಾದ ವೇಷಗಳಿಗೆ ತನ್ನದೆ ಛಾಪು ಭಿತ್ತಿ ಮೇರು ಕಲಾವಿದರಾದರು. ಯಕ್ಷಗಾನದಿಂದ ಆರ್ಥಿಕವಾಗಿ ಗಳಿಸಿದ್ದು ಕಡಿಮೆ. ಜನಪ್ರಿಯತೆ ಮತ್ತು ಪ್ರಶಸ್ತಿಗಳ ಬೆನ್ನು ಹತ್ತಿದವರಲ್ಲ. ಸಹೃದಯ ಕಲಾಭಿಮಾನಿಗಳೇ ಅವರು ಸಂಪಾದಿಸಿದ ಆಸ್ತಿ. 2015 ರಲ್ಲಿ ವೃತ್ತಿಪರ ಮೇಳದಿಂದ ತಿರುಗಾಟಕ್ಕೆ ನಿವೃತ್ತಿ ಹೇಳಿದ್ದಾರೆ. ಇವರ ಕಲಾಸೇವೆಗೆ ಈಗಾಗಲೇ 100 ಅಧಿಕ ಸನ್ಮಾನ, ಗೌರವಗಳು ಸಂದಿವೆ.

ಯಕ್ಷಗಾನ ಬಯಲಾಟ
ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದಿಂದ ವೇದೋದ್ಧರಣ-ಶಿವ ಪಂಚಾಕ್ಷರಿ ಮಹಿಮೆ ಎಂಬ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

5 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

6 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago