Advertisement
MIRROR FOCUS

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

Share

ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.  ಇದೇ ಸಂದರ್ಭ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲೆಯ ಪ್ರೋತ್ಸಾಹದ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯುತ್ತಿದೆ. ಇದೇ ಸಂದರ್ಭ ಒಬ್ಬ  ಕಲಾವಿದರನ್ನು ಗುರುತಿಸಿ, ಗೌರವಿಸುವ ಕಾರ್ಯಕ್ರಮವೂ ನಡೆಯುತ್ತಿದೆ. ಈ  ಬಾರಿ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರನ್ನು ಗೌರವಿಸಲಾಗುತ್ತಿದೆ.

ಉಬರಡ್ಕ ಉಮೇಶ್‌ ಶೆಟ್ಟಿ ಅವರು ದಿ, ಕುರಿಯ ವಿಠಲ ಶಾಸ್ತ್ರೀ ಮತ್ತು ದಿ, ಪಡ್ರೆ ಚಂದು ಅವರಿಂದ ಯಕ್ಷಗಾನ ಕಲೆಯನ್ನು ಅಭ್ಯಸಿಸಿದ್ದರು. ಧರ್ಮಸ್ಥಳ ಲಲಿತಾ ಕಲಾಕೇಂದ್ರದ ಮೊದಲನೇ ವರ್ಷದ ವಿದ್ಯಾರ್ಥಿಯಾಗಿರುವ ಉಮೇಶ್‌ ಶೆಟ್ಟಿ ಅವರು 1972ರಲ್ಲಿ ಶ್ರೀ ಧರ್ಮಸ್ಥಳ ಮೇಳ ಮೂಲಕ ಕಲಾಸೇವೆ ಆರಂಭಿಸಿ 2015 ರ ವರೆಗೆ ಅಂದರೆ ಸುಮಾರು 44 ವರ್ಷ ಕಲಾಸೇವೆ ನಡೆಸಿದ್ದಾರೆ. ಸದ್ಯ ಶ್ರೀ ಹನುಮಗಿರಿ ಮೇಳದಲ್ಲಿ ಅತಿಥಿ ಕಲಾವಿದ.

ತನ್ನ ಸೋದರ ಮಾವನವರಾದ ದಿ. ಅಳಿಕೆ ರಾಮಯ್ಯ ರೈ ಅವರ ಪ್ರೇರಣೆಯಂತೆ ಯಕ್ಷಗಾನಕ್ಕೆ ಪಾದಾರ್ಪಣೆ ಮಾಡಿರುವ ಉಮೇಶ್‌ ಶೆಟ್ಟಿ ಅವರು, ಕಡತೋಕ ಭಾಗವತರು ಮತ್ತು ಚಿಪ್ಪಾರು ಬಲ್ಲಾಳರ  ಮಾರ್ಗದರ್ಶನದಲ್ಲಿ ಅಣ್ಣಪ್ಪ, ಕಂಸ, ಹಿರಣ್ಯಕಶ್ಯಪ, ದ್ರೋಣ, ಅತಿಕಾಯ, ಹನೂಮಂತ ಮೊದಲಾದ ವೇಷಗಳಿಗೆ ತನ್ನದೆ ಛಾಪು ಭಿತ್ತಿ ಮೇರು ಕಲಾವಿದರಾದರು. ಯಕ್ಷಗಾನದಿಂದ ಆರ್ಥಿಕವಾಗಿ ಗಳಿಸಿದ್ದು ಕಡಿಮೆ. ಜನಪ್ರಿಯತೆ ಮತ್ತು ಪ್ರಶಸ್ತಿಗಳ ಬೆನ್ನು ಹತ್ತಿದವರಲ್ಲ. ಸಹೃದಯ ಕಲಾಭಿಮಾನಿಗಳೇ ಅವರು ಸಂಪಾದಿಸಿದ ಆಸ್ತಿ. 2015 ರಲ್ಲಿ ವೃತ್ತಿಪರ ಮೇಳದಿಂದ ತಿರುಗಾಟಕ್ಕೆ ನಿವೃತ್ತಿ ಹೇಳಿದ್ದಾರೆ. ಇವರ ಕಲಾಸೇವೆಗೆ ಈಗಾಗಲೇ 100 ಅಧಿಕ ಸನ್ಮಾನ, ಗೌರವಗಳು ಸಂದಿವೆ.

ಯಕ್ಷಗಾನ ಬಯಲಾಟ
ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದಿಂದ ವೇದೋದ್ಧರಣ-ಶಿವ ಪಂಚಾಕ್ಷರಿ ಮಹಿಮೆ ಎಂಬ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

27 minutes ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

7 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

7 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

15 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

17 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

23 hours ago