Advertisement
MIRROR FOCUS

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

Share

ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.  ಇದೇ ಸಂದರ್ಭ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲೆಯ ಪ್ರೋತ್ಸಾಹದ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯುತ್ತಿದೆ. ಇದೇ ಸಂದರ್ಭ ಒಬ್ಬ  ಕಲಾವಿದರನ್ನು ಗುರುತಿಸಿ, ಗೌರವಿಸುವ ಕಾರ್ಯಕ್ರಮವೂ ನಡೆಯುತ್ತಿದೆ. ಈ  ಬಾರಿ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರನ್ನು ಗೌರವಿಸಲಾಗುತ್ತಿದೆ.

ಉಬರಡ್ಕ ಉಮೇಶ್‌ ಶೆಟ್ಟಿ ಅವರು ದಿ, ಕುರಿಯ ವಿಠಲ ಶಾಸ್ತ್ರೀ ಮತ್ತು ದಿ, ಪಡ್ರೆ ಚಂದು ಅವರಿಂದ ಯಕ್ಷಗಾನ ಕಲೆಯನ್ನು ಅಭ್ಯಸಿಸಿದ್ದರು. ಧರ್ಮಸ್ಥಳ ಲಲಿತಾ ಕಲಾಕೇಂದ್ರದ ಮೊದಲನೇ ವರ್ಷದ ವಿದ್ಯಾರ್ಥಿಯಾಗಿರುವ ಉಮೇಶ್‌ ಶೆಟ್ಟಿ ಅವರು 1972ರಲ್ಲಿ ಶ್ರೀ ಧರ್ಮಸ್ಥಳ ಮೇಳ ಮೂಲಕ ಕಲಾಸೇವೆ ಆರಂಭಿಸಿ 2015 ರ ವರೆಗೆ ಅಂದರೆ ಸುಮಾರು 44 ವರ್ಷ ಕಲಾಸೇವೆ ನಡೆಸಿದ್ದಾರೆ. ಸದ್ಯ ಶ್ರೀ ಹನುಮಗಿರಿ ಮೇಳದಲ್ಲಿ ಅತಿಥಿ ಕಲಾವಿದ.

ತನ್ನ ಸೋದರ ಮಾವನವರಾದ ದಿ. ಅಳಿಕೆ ರಾಮಯ್ಯ ರೈ ಅವರ ಪ್ರೇರಣೆಯಂತೆ ಯಕ್ಷಗಾನಕ್ಕೆ ಪಾದಾರ್ಪಣೆ ಮಾಡಿರುವ ಉಮೇಶ್‌ ಶೆಟ್ಟಿ ಅವರು, ಕಡತೋಕ ಭಾಗವತರು ಮತ್ತು ಚಿಪ್ಪಾರು ಬಲ್ಲಾಳರ  ಮಾರ್ಗದರ್ಶನದಲ್ಲಿ ಅಣ್ಣಪ್ಪ, ಕಂಸ, ಹಿರಣ್ಯಕಶ್ಯಪ, ದ್ರೋಣ, ಅತಿಕಾಯ, ಹನೂಮಂತ ಮೊದಲಾದ ವೇಷಗಳಿಗೆ ತನ್ನದೆ ಛಾಪು ಭಿತ್ತಿ ಮೇರು ಕಲಾವಿದರಾದರು. ಯಕ್ಷಗಾನದಿಂದ ಆರ್ಥಿಕವಾಗಿ ಗಳಿಸಿದ್ದು ಕಡಿಮೆ. ಜನಪ್ರಿಯತೆ ಮತ್ತು ಪ್ರಶಸ್ತಿಗಳ ಬೆನ್ನು ಹತ್ತಿದವರಲ್ಲ. ಸಹೃದಯ ಕಲಾಭಿಮಾನಿಗಳೇ ಅವರು ಸಂಪಾದಿಸಿದ ಆಸ್ತಿ. 2015 ರಲ್ಲಿ ವೃತ್ತಿಪರ ಮೇಳದಿಂದ ತಿರುಗಾಟಕ್ಕೆ ನಿವೃತ್ತಿ ಹೇಳಿದ್ದಾರೆ. ಇವರ ಕಲಾಸೇವೆಗೆ ಈಗಾಗಲೇ 100 ಅಧಿಕ ಸನ್ಮಾನ, ಗೌರವಗಳು ಸಂದಿವೆ.

ಯಕ್ಷಗಾನ ಬಯಲಾಟ
ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದಿಂದ ವೇದೋದ್ಧರಣ-ಶಿವ ಪಂಚಾಕ್ಷರಿ ಮಹಿಮೆ ಎಂಬ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago