Advertisement
MIRROR FOCUS

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

Share

ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.  ಇದೇ ಸಂದರ್ಭ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.

Advertisement
Advertisement

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲೆಯ ಪ್ರೋತ್ಸಾಹದ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯುತ್ತಿದೆ. ಇದೇ ಸಂದರ್ಭ ಒಬ್ಬ  ಕಲಾವಿದರನ್ನು ಗುರುತಿಸಿ, ಗೌರವಿಸುವ ಕಾರ್ಯಕ್ರಮವೂ ನಡೆಯುತ್ತಿದೆ. ಈ  ಬಾರಿ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರನ್ನು ಗೌರವಿಸಲಾಗುತ್ತಿದೆ.

Advertisement

ಉಬರಡ್ಕ ಉಮೇಶ್‌ ಶೆಟ್ಟಿ ಅವರು ದಿ, ಕುರಿಯ ವಿಠಲ ಶಾಸ್ತ್ರೀ ಮತ್ತು ದಿ, ಪಡ್ರೆ ಚಂದು ಅವರಿಂದ ಯಕ್ಷಗಾನ ಕಲೆಯನ್ನು ಅಭ್ಯಸಿಸಿದ್ದರು. ಧರ್ಮಸ್ಥಳ ಲಲಿತಾ ಕಲಾಕೇಂದ್ರದ ಮೊದಲನೇ ವರ್ಷದ ವಿದ್ಯಾರ್ಥಿಯಾಗಿರುವ ಉಮೇಶ್‌ ಶೆಟ್ಟಿ ಅವರು 1972ರಲ್ಲಿ ಶ್ರೀ ಧರ್ಮಸ್ಥಳ ಮೇಳ ಮೂಲಕ ಕಲಾಸೇವೆ ಆರಂಭಿಸಿ 2015 ರ ವರೆಗೆ ಅಂದರೆ ಸುಮಾರು 44 ವರ್ಷ ಕಲಾಸೇವೆ ನಡೆಸಿದ್ದಾರೆ. ಸದ್ಯ ಶ್ರೀ ಹನುಮಗಿರಿ ಮೇಳದಲ್ಲಿ ಅತಿಥಿ ಕಲಾವಿದ.

ತನ್ನ ಸೋದರ ಮಾವನವರಾದ ದಿ. ಅಳಿಕೆ ರಾಮಯ್ಯ ರೈ ಅವರ ಪ್ರೇರಣೆಯಂತೆ ಯಕ್ಷಗಾನಕ್ಕೆ ಪಾದಾರ್ಪಣೆ ಮಾಡಿರುವ ಉಮೇಶ್‌ ಶೆಟ್ಟಿ ಅವರು, ಕಡತೋಕ ಭಾಗವತರು ಮತ್ತು ಚಿಪ್ಪಾರು ಬಲ್ಲಾಳರ  ಮಾರ್ಗದರ್ಶನದಲ್ಲಿ ಅಣ್ಣಪ್ಪ, ಕಂಸ, ಹಿರಣ್ಯಕಶ್ಯಪ, ದ್ರೋಣ, ಅತಿಕಾಯ, ಹನೂಮಂತ ಮೊದಲಾದ ವೇಷಗಳಿಗೆ ತನ್ನದೆ ಛಾಪು ಭಿತ್ತಿ ಮೇರು ಕಲಾವಿದರಾದರು. ಯಕ್ಷಗಾನದಿಂದ ಆರ್ಥಿಕವಾಗಿ ಗಳಿಸಿದ್ದು ಕಡಿಮೆ. ಜನಪ್ರಿಯತೆ ಮತ್ತು ಪ್ರಶಸ್ತಿಗಳ ಬೆನ್ನು ಹತ್ತಿದವರಲ್ಲ. ಸಹೃದಯ ಕಲಾಭಿಮಾನಿಗಳೇ ಅವರು ಸಂಪಾದಿಸಿದ ಆಸ್ತಿ. 2015 ರಲ್ಲಿ ವೃತ್ತಿಪರ ಮೇಳದಿಂದ ತಿರುಗಾಟಕ್ಕೆ ನಿವೃತ್ತಿ ಹೇಳಿದ್ದಾರೆ. ಇವರ ಕಲಾಸೇವೆಗೆ ಈಗಾಗಲೇ 100 ಅಧಿಕ ಸನ್ಮಾನ, ಗೌರವಗಳು ಸಂದಿವೆ.

Advertisement
ಯಕ್ಷಗಾನ ಬಯಲಾಟ
ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದಿಂದ ವೇದೋದ್ಧರಣ-ಶಿವ ಪಂಚಾಕ್ಷರಿ ಮಹಿಮೆ ಎಂಬ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

2 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

2 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

3 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

3 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

6 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

8 hours ago