Advertisement
MIRROR FOCUS

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

Share

ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.  ಇದೇ ಸಂದರ್ಭ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲೆಯ ಪ್ರೋತ್ಸಾಹದ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯುತ್ತಿದೆ. ಇದೇ ಸಂದರ್ಭ ಒಬ್ಬ  ಕಲಾವಿದರನ್ನು ಗುರುತಿಸಿ, ಗೌರವಿಸುವ ಕಾರ್ಯಕ್ರಮವೂ ನಡೆಯುತ್ತಿದೆ. ಈ  ಬಾರಿ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರನ್ನು ಗೌರವಿಸಲಾಗುತ್ತಿದೆ.

ಉಬರಡ್ಕ ಉಮೇಶ್‌ ಶೆಟ್ಟಿ ಅವರು ದಿ, ಕುರಿಯ ವಿಠಲ ಶಾಸ್ತ್ರೀ ಮತ್ತು ದಿ, ಪಡ್ರೆ ಚಂದು ಅವರಿಂದ ಯಕ್ಷಗಾನ ಕಲೆಯನ್ನು ಅಭ್ಯಸಿಸಿದ್ದರು. ಧರ್ಮಸ್ಥಳ ಲಲಿತಾ ಕಲಾಕೇಂದ್ರದ ಮೊದಲನೇ ವರ್ಷದ ವಿದ್ಯಾರ್ಥಿಯಾಗಿರುವ ಉಮೇಶ್‌ ಶೆಟ್ಟಿ ಅವರು 1972ರಲ್ಲಿ ಶ್ರೀ ಧರ್ಮಸ್ಥಳ ಮೇಳ ಮೂಲಕ ಕಲಾಸೇವೆ ಆರಂಭಿಸಿ 2015 ರ ವರೆಗೆ ಅಂದರೆ ಸುಮಾರು 44 ವರ್ಷ ಕಲಾಸೇವೆ ನಡೆಸಿದ್ದಾರೆ. ಸದ್ಯ ಶ್ರೀ ಹನುಮಗಿರಿ ಮೇಳದಲ್ಲಿ ಅತಿಥಿ ಕಲಾವಿದ.

ತನ್ನ ಸೋದರ ಮಾವನವರಾದ ದಿ. ಅಳಿಕೆ ರಾಮಯ್ಯ ರೈ ಅವರ ಪ್ರೇರಣೆಯಂತೆ ಯಕ್ಷಗಾನಕ್ಕೆ ಪಾದಾರ್ಪಣೆ ಮಾಡಿರುವ ಉಮೇಶ್‌ ಶೆಟ್ಟಿ ಅವರು, ಕಡತೋಕ ಭಾಗವತರು ಮತ್ತು ಚಿಪ್ಪಾರು ಬಲ್ಲಾಳರ  ಮಾರ್ಗದರ್ಶನದಲ್ಲಿ ಅಣ್ಣಪ್ಪ, ಕಂಸ, ಹಿರಣ್ಯಕಶ್ಯಪ, ದ್ರೋಣ, ಅತಿಕಾಯ, ಹನೂಮಂತ ಮೊದಲಾದ ವೇಷಗಳಿಗೆ ತನ್ನದೆ ಛಾಪು ಭಿತ್ತಿ ಮೇರು ಕಲಾವಿದರಾದರು. ಯಕ್ಷಗಾನದಿಂದ ಆರ್ಥಿಕವಾಗಿ ಗಳಿಸಿದ್ದು ಕಡಿಮೆ. ಜನಪ್ರಿಯತೆ ಮತ್ತು ಪ್ರಶಸ್ತಿಗಳ ಬೆನ್ನು ಹತ್ತಿದವರಲ್ಲ. ಸಹೃದಯ ಕಲಾಭಿಮಾನಿಗಳೇ ಅವರು ಸಂಪಾದಿಸಿದ ಆಸ್ತಿ. 2015 ರಲ್ಲಿ ವೃತ್ತಿಪರ ಮೇಳದಿಂದ ತಿರುಗಾಟಕ್ಕೆ ನಿವೃತ್ತಿ ಹೇಳಿದ್ದಾರೆ. ಇವರ ಕಲಾಸೇವೆಗೆ ಈಗಾಗಲೇ 100 ಅಧಿಕ ಸನ್ಮಾನ, ಗೌರವಗಳು ಸಂದಿವೆ.

ಯಕ್ಷಗಾನ ಬಯಲಾಟ
ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದಿಂದ ವೇದೋದ್ಧರಣ-ಶಿವ ಪಂಚಾಕ್ಷರಿ ಮಹಿಮೆ ಎಂಬ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

4 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

4 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

13 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

21 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago