ಯಕ್ಷಗಾನದ ಕಲಿಕೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿಯೂ ಬಹಳ ಉಪಯುಕ್ತ. ಹಿಮ್ಮೇಳ,ಮಾತುಗಾರಿಕೆ,ನಾಟ್ಯ,ವೇಷಭೂಷಣ ಸೇರಿದಂತೆ ಯಕ್ಷಗಾನ ಒಂದು ಸರ್ವಾಂಗೀಣ ಕಲೆ. ಕಳೆದ 35 ವರ್ಷಗಳಿಂದ ಹಿಮ್ಮೇಳ ವಾದಕನಾಗಿ, ಗುರುವಾಗಿ ದುಡಿಯುತ್ತಿದ್ದೇನೆ. ಕಲಿಕೆಗೆ ಪೂರಕವಾದ ವಾತಾವರಣರಂಗಮನೆಯಲ್ಲಿದೆ’ ಎಂದು ಖ್ಯಾತ ಹಿಮ್ಮೇಳ ಗುರುಗಳಾದ ವಳಕುಂಜ ಕುಮಾರ ಸುಬ್ರಹ್ಮಣ್ಯ ಹೇಳಿದರು.
ಅವರು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಸುಜನಾ ಯಕ್ಷ ಶಿಕ್ಷಣ ಕೇಂದ್ರದ ಆಶ್ರಯದಲ್ಲಿ ನಡೆಯುವ 2023-24 ನೇ ಸಾಲಿನ ಯಕ್ಷಗಾನ ನಾಟ್ಯ ಮತ್ತು ಹಿಮ್ಮೇಳ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.ಹಿರಿಯ ಯಕ್ಷರಂಗ ಕಲಾವಿದ ಸುಜನಾ ಸುಳ್ಯರವರು ದೀಪಬೆಳಗಿಸಿ ತರಗತಿಗೆ ಚಾಲನೆ ನೀಡಿದರು. ಯಕ್ಷಗಾನ ನಾಟ್ಯಗುರುಗಳಾದ, ಕಲಾವಿದೆ ಸರೋಜಿನಿ ಬನಾರಿ, ಉದ್ಯಮಿ ಬಾಲಕೃಷ್ಣ ಬಲ್ಲಾಳ್ ಅತಿಥಿಗಳಾಗಿ ಭಾಗವಹಿಸಿದರು.
ರಂಗಮನೆಯ ಅಧ್ಯಕ್ಷರಾದ ಡಾ.ಜೀವನ್ ರಾಂ ಸುಳ್ಯ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ರಂಗಮನೆಯ ಸದಸ್ಯರಾದ ರವೀಶ್ ಪಡ್ಡಂಬೈಲು ವಂದಿಸಿದರು.
ಯಕ್ಷಗಾನ ನಾಟ್ಯ ತರಗತಿಯು ಪೂ.9.30 ರಿಂದ 11.30 ವರೆಗೆ ಹಾಗೂ ಚೆಂಡೆ – ಮದ್ದಳೆ ತರಗತಿಯು ಪೂ.9.00 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯುತ್ತದೆ. ಒಂದು ಗಂಟೆ ಅವಧಿಯ ಹಿಮ್ಮೇಳ ತರಗತಿಯನ್ನು ಕಲಿಯುವವರು ತಮ್ಮ ಅನುಕೂಲದ ಸಮಯವನ್ನು ಹೊಂದಿಸಿಕೊಳ್ಳಲು ಅವಕಾಶವಿದೆ. ಆಸಕ್ತರು ಗುರುಗಳಾದ ಶ್ರೀಮತಿ ಸರೋಜಿನಿ ಬನಾರಿ (9441189710 )
ಮತ್ತು ಶ್ರೀ ಕುಮಾರ ಸುಬ್ರಹ್ಮಣ್ಯ ( 9449915777 ) ಇವರನ್ನು ಸಂಪರ್ಕಿಸಬಹುದು.
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…