Advertisement
ಸುದ್ದಿಗಳು

ಯಕ್ಷಗಾನ ಸರ್ವಾಂಗೀಣ ಕಲೆ | ರಂಗಮನೆ ಯಕ್ಷ ನಾಟ್ಯ-ಹಿಮ್ಮೇಳ ಶಿಕ್ಷಣ ಉದ್ಘಾಟನೆಯಲ್ಲಿ ಕುಮಾರ ಸುಬ್ರಹ್ಮಣ್ಯ |

Share

ಯಕ್ಷಗಾನದ ಕಲಿಕೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿಯೂ ಬಹಳ ಉಪಯುಕ್ತ. ಹಿಮ್ಮೇಳ,ಮಾತುಗಾರಿಕೆ,ನಾಟ್ಯ,ವೇಷಭೂಷಣ ಸೇರಿದಂತೆ ಯಕ್ಷಗಾನ ಒಂದು ಸರ್ವಾಂಗೀಣ ಕಲೆ. ಕಳೆದ 35 ವರ್ಷಗಳಿಂದ ಹಿಮ್ಮೇಳ ವಾದಕನಾಗಿ, ಗುರುವಾಗಿ ದುಡಿಯುತ್ತಿದ್ದೇನೆ. ಕಲಿಕೆಗೆ ಪೂರಕವಾದ ವಾತಾವರಣರಂಗಮನೆಯಲ್ಲಿದೆ’ ಎಂದು ಖ್ಯಾತ ಹಿಮ್ಮೇಳ ಗುರುಗಳಾದ ವಳಕುಂಜ ಕುಮಾರ ಸುಬ್ರಹ್ಮಣ್ಯ ಹೇಳಿದರು.

ಅವರು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಸುಜನಾ ಯಕ್ಷ ಶಿಕ್ಷಣ ಕೇಂದ್ರದ ಆಶ್ರಯದಲ್ಲಿ ನಡೆಯುವ 2023-24 ನೇ ಸಾಲಿನ ಯಕ್ಷಗಾನ ನಾಟ್ಯ ಮತ್ತು ಹಿಮ್ಮೇಳ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.ಹಿರಿಯ ಯಕ್ಷರಂಗ ಕಲಾವಿದ ಸುಜನಾ ಸುಳ್ಯರವರು ದೀಪಬೆಳಗಿಸಿ ತರಗತಿಗೆ ಚಾಲನೆ ನೀಡಿದರು. ಯಕ್ಷಗಾನ ನಾಟ್ಯಗುರುಗಳಾದ, ಕಲಾವಿದೆ  ಸರೋಜಿನಿ ಬನಾರಿ, ಉದ್ಯಮಿ ಬಾಲಕೃಷ್ಣ ಬಲ್ಲಾಳ್ ಅತಿಥಿಗಳಾಗಿ ಭಾಗವಹಿಸಿದರು.

ರಂಗಮನೆಯ ಅಧ್ಯಕ್ಷರಾದ ಡಾ.ಜೀವನ್ ರಾಂ ಸುಳ್ಯ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ರಂಗಮನೆಯ ಸದಸ್ಯರಾದ ರವೀಶ್ ಪಡ್ಡಂಬೈಲು ವಂದಿಸಿದರು.

ಯಕ್ಷಗಾನ ನಾಟ್ಯ ತರಗತಿಯು ಪೂ.9.30 ರಿಂದ 11.30 ವರೆಗೆ ಹಾಗೂ ಚೆಂಡೆ – ಮದ್ದಳೆ ತರಗತಿಯು ಪೂ.9.00 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯುತ್ತದೆ. ಒಂದು ಗಂಟೆ ಅವಧಿಯ ಹಿಮ್ಮೇಳ ತರಗತಿಯನ್ನು ಕಲಿಯುವವರು ತಮ್ಮ ಅನುಕೂಲದ ಸಮಯವನ್ನು ಹೊಂದಿಸಿಕೊಳ್ಳಲು ಅವಕಾಶವಿದೆ. ಆಸಕ್ತರು ಗುರುಗಳಾದ ಶ್ರೀಮತಿ ಸರೋಜಿನಿ ಬನಾರಿ (9441189710 )
ಮತ್ತು ಶ್ರೀ ಕುಮಾರ ಸುಬ್ರಹ್ಮಣ್ಯ ( 9449915777 ) ಇವರನ್ನು ಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 01-08-2026 | ಕರಾವಳಿಯ-ಮಲೆನಾಡಲ್ಲಿ ಮಳೆ ಹೆಚ್ಚಳಕ್ಕೆ ಕಾರಣವೇನು..? – ಆಗಸ್ಟ್ 3 ರಿಂದ ಮಳೆ ಕಡಿಮೆ ಸಾಧ್ಯತೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 2ರವರೆಗೆ ಬಿಟ್ಟು ಬಿಟ್ಟು ಮಳೆಯಾಗಲಿದ್ದು, ಆಗಸ್ಟ್ 3ರಿಂದ…

4 hours ago

ಪಶ್ಚಿಮ ಘಟ್ಟಕ್ಕೆ ಮತ್ತೆ ಕೇಂದ್ರದ ಹೊಸ ನೋಟಿಫಿಕೇಶನ್ – ಕರ್ನಾಟಕದ ಸಾವಿರಾರು ಗ್ರಾಮಗಳ ಮೇಲೆ ಪರಿಣಾಮವೇ?

ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು…

7 hours ago

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

17 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

18 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

20 hours ago