Advertisement
ಕಲೆ-ಸಂಸ್ಕೃತಿ

ಯಕ್ಷಗಾನ ತಾಳಮದ್ದಳೆ ನರಕಾಸುರ ಮೋಕ್ಷ ಕಾರ್ಯಕ್ರಮ: ಸೆ. 27ರಂದು ಯುಟ್ಯೂಬ್‌ನಲ್ಲಿ ಪ್ರಸಾರ

Share
ಕೊರೋನಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ , ಕಾಲೇಜುಗಳು ಆರಂಭಗೊಳ್ಳದೆ ಶಿಕ್ಷಣವನ್ನು ಆನ್‌ಲೈನ್ ಮೂಲಕ ಕಲಿಯುವ ಅರ್ನಿವಾಯತೆ ತಲೆದೋರಿದರೂ ಸಾಂಸ್ಕೃತಿಕ ರಸದೌತಣವನ್ನು ನೀಡಲು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ನರಕಾಸುರ ಮೋಕ್ಷ ಎಂಬ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಯುಟ್ಯೂಬ್‌ನಲ್ಲಿ ಬಿತ್ತರಗೊಳ್ಳಲಿದೆ. ಈ ಕಾರ್ಯಕ್ರಮವು ಸೆ. 27ನೇ ತಾರೀಕಿನಂದು ಸಂಜೆ ಆರು ಗಂಟೆಗೆ ಪ್ರಸಾರವಾಗಲಿದೆ.

ಮುಮ್ಮೇಳದಲ್ಲಿ ದೇವೆಂದ್ರನಾಗಿ ವಿದ್ಯಾರ್ಥಿನಿ ಕೃತಿ ಕೆ.ಎಂ, ನಾರದನಾಗಿ ಶ್ರೀ ವಿದ್ಯಾ ಬಿ.ಆರ್, ಶ್ರೀಕೃಷ್ಣನಾಗಿ ಗಹನಶ್ರೀ, ಸತ್ಯಭಾಮೆಯಾಗಿ ಭಾಗವಹಿಸಿದ ಶ್ರೇಯಾ, ನರಕಾಸುರನಾಗಿ ಅನೀಶ್ ಕೃಷ್ಣ, ಮುರಾಸುರನಾಗಿ ಅನ್ವಿತ್ ಗೊಪ, ದೇವದೂತನಾಗಿ ಭಗತ್ ಎಚ್ ಎನ್ ಭಾಗವಹಿಸಿರುತ್ತಾರೆ.

ಅದೇ ರೀತಿ ಹಿಮ್ಮೇಳದಲ್ಲಿ ಭಾಗವತಿಕೆಗೆ ಹೇಮಸ್ವಾತಿ ಕುರಿಯಾಜೆ, ಚೆಂಡೆಯಲ್ಲಿ ಅಂಬಾತನಯ ಅರ್ನಾಡಿ, ಮದ್ದಳೆಯಲ್ಲಿ ಭೀಮ ಭಾರದ್ವಾಜ್, ಚಕ್ರತಾಳದಲ್ಲಿ ನವೀನಕೃಷ್ಣ ಮತ್ತು ಸಾತ್ವಿಕ್ ವಿ ನಾಯಕ್ ಮತ್ತು ನಿರೂಪಕಿಯಗಿ ದೇವಿಕಾ ಕುರಿಯಾಜೆ ತಮ್ಮ ಸಹಕಾರವನ್ನು ನೀಡಿರುತ್ತಾರೆ. ಈ ಕಾರ್ಯಕ್ರಮದ ಸಾಹಿತ್ಯ ಮತ್ತು ನಿರ್ದೇಶನವನ್ನು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ವಿ ಶೆಟ್ಟಿಗಾರ್ ,ಸಮನ್ವಯ ಮತ್ತು ಸಂಕಲನಕಾರರಾಗಿ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಅಜಯಶಾಸ್ತ್ರಿ ನಿರ್ವಹಿಸಿರುತ್ತಾರೆ. ಇದರ ಜೊತೆಗೆ ವಿವೇಕಾನಂದ ಪದವಿ ಕಾಲೇಜಿನ ವಿಕಸನ ಸ್ಟುಡಿಯೋ ಈ ಕಾರ್ಯಕ್ರಮಕ್ಕೆ ಸಂಪುರ್ಣ ಸಹಕಾರವನ್ನು ನೀಡಿದೆ.

ನಿಗದಿಪಡಿಸಲಾದ ಸಮಯದಲ್ಲಿ http://youtu.be/lr7i3SKQCBo ಲಿಂಕ್ ಓಪನ್ ಮಾಡುವ ಮೂಲಕ ಈ ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶವಿದೆ. ಅದೇ ರೀತಿ ಯುಟ್ಯೂಬ್‌ನಲ್ಲಿ Vpuc Puttur ಎಂದು ಸರ್ಚ್ ಮಾಡಿದರೂ ಆಯ್ಕೆ ಲಭ್ಯವಿರುತ್ತದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

24 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago