ಮುಮ್ಮೇಳದಲ್ಲಿ ದೇವೆಂದ್ರನಾಗಿ ವಿದ್ಯಾರ್ಥಿನಿ ಕೃತಿ ಕೆ.ಎಂ, ನಾರದನಾಗಿ ಶ್ರೀ ವಿದ್ಯಾ ಬಿ.ಆರ್, ಶ್ರೀಕೃಷ್ಣನಾಗಿ ಗಹನಶ್ರೀ, ಸತ್ಯಭಾಮೆಯಾಗಿ ಭಾಗವಹಿಸಿದ ಶ್ರೇಯಾ, ನರಕಾಸುರನಾಗಿ ಅನೀಶ್ ಕೃಷ್ಣ, ಮುರಾಸುರನಾಗಿ ಅನ್ವಿತ್ ಗೊಪ, ದೇವದೂತನಾಗಿ ಭಗತ್ ಎಚ್ ಎನ್ ಭಾಗವಹಿಸಿರುತ್ತಾರೆ.
ಅದೇ ರೀತಿ ಹಿಮ್ಮೇಳದಲ್ಲಿ ಭಾಗವತಿಕೆಗೆ ಹೇಮಸ್ವಾತಿ ಕುರಿಯಾಜೆ, ಚೆಂಡೆಯಲ್ಲಿ ಅಂಬಾತನಯ ಅರ್ನಾಡಿ, ಮದ್ದಳೆಯಲ್ಲಿ ಭೀಮ ಭಾರದ್ವಾಜ್, ಚಕ್ರತಾಳದಲ್ಲಿ ನವೀನಕೃಷ್ಣ ಮತ್ತು ಸಾತ್ವಿಕ್ ವಿ ನಾಯಕ್ ಮತ್ತು ನಿರೂಪಕಿಯಗಿ ದೇವಿಕಾ ಕುರಿಯಾಜೆ ತಮ್ಮ ಸಹಕಾರವನ್ನು ನೀಡಿರುತ್ತಾರೆ. ಈ ಕಾರ್ಯಕ್ರಮದ ಸಾಹಿತ್ಯ ಮತ್ತು ನಿರ್ದೇಶನವನ್ನು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ವಿ ಶೆಟ್ಟಿಗಾರ್ ,ಸಮನ್ವಯ ಮತ್ತು ಸಂಕಲನಕಾರರಾಗಿ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಅಜಯಶಾಸ್ತ್ರಿ ನಿರ್ವಹಿಸಿರುತ್ತಾರೆ. ಇದರ ಜೊತೆಗೆ ವಿವೇಕಾನಂದ ಪದವಿ ಕಾಲೇಜಿನ ವಿಕಸನ ಸ್ಟುಡಿಯೋ ಈ ಕಾರ್ಯಕ್ರಮಕ್ಕೆ ಸಂಪುರ್ಣ ಸಹಕಾರವನ್ನು ನೀಡಿದೆ.
ನಿಗದಿಪಡಿಸಲಾದ ಸಮಯದಲ್ಲಿ http://youtu.be/lr7i3SKQCBo ಲಿಂಕ್ ಓಪನ್ ಮಾಡುವ ಮೂಲಕ ಈ ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶವಿದೆ. ಅದೇ ರೀತಿ ಯುಟ್ಯೂಬ್ನಲ್ಲಿ Vpuc Puttur ಎಂದು ಸರ್ಚ್ ಮಾಡಿದರೂ ಆಯ್ಕೆ ಲಭ್ಯವಿರುತ್ತದೆ
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…