Advertisement
ಕಲೆ-ಸಂಸ್ಕೃತಿ

ಯಕ್ಷಗಾನ ತಾಳಮದ್ದಳೆ ನರಕಾಸುರ ಮೋಕ್ಷ ಕಾರ್ಯಕ್ರಮ: ಸೆ. 27ರಂದು ಯುಟ್ಯೂಬ್‌ನಲ್ಲಿ ಪ್ರಸಾರ

Share
ಕೊರೋನಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ , ಕಾಲೇಜುಗಳು ಆರಂಭಗೊಳ್ಳದೆ ಶಿಕ್ಷಣವನ್ನು ಆನ್‌ಲೈನ್ ಮೂಲಕ ಕಲಿಯುವ ಅರ್ನಿವಾಯತೆ ತಲೆದೋರಿದರೂ ಸಾಂಸ್ಕೃತಿಕ ರಸದೌತಣವನ್ನು ನೀಡಲು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ನರಕಾಸುರ ಮೋಕ್ಷ ಎಂಬ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಯುಟ್ಯೂಬ್‌ನಲ್ಲಿ ಬಿತ್ತರಗೊಳ್ಳಲಿದೆ. ಈ ಕಾರ್ಯಕ್ರಮವು ಸೆ. 27ನೇ ತಾರೀಕಿನಂದು ಸಂಜೆ ಆರು ಗಂಟೆಗೆ ಪ್ರಸಾರವಾಗಲಿದೆ.

ಮುಮ್ಮೇಳದಲ್ಲಿ ದೇವೆಂದ್ರನಾಗಿ ವಿದ್ಯಾರ್ಥಿನಿ ಕೃತಿ ಕೆ.ಎಂ, ನಾರದನಾಗಿ ಶ್ರೀ ವಿದ್ಯಾ ಬಿ.ಆರ್, ಶ್ರೀಕೃಷ್ಣನಾಗಿ ಗಹನಶ್ರೀ, ಸತ್ಯಭಾಮೆಯಾಗಿ ಭಾಗವಹಿಸಿದ ಶ್ರೇಯಾ, ನರಕಾಸುರನಾಗಿ ಅನೀಶ್ ಕೃಷ್ಣ, ಮುರಾಸುರನಾಗಿ ಅನ್ವಿತ್ ಗೊಪ, ದೇವದೂತನಾಗಿ ಭಗತ್ ಎಚ್ ಎನ್ ಭಾಗವಹಿಸಿರುತ್ತಾರೆ.

Advertisement

ಅದೇ ರೀತಿ ಹಿಮ್ಮೇಳದಲ್ಲಿ ಭಾಗವತಿಕೆಗೆ ಹೇಮಸ್ವಾತಿ ಕುರಿಯಾಜೆ, ಚೆಂಡೆಯಲ್ಲಿ ಅಂಬಾತನಯ ಅರ್ನಾಡಿ, ಮದ್ದಳೆಯಲ್ಲಿ ಭೀಮ ಭಾರದ್ವಾಜ್, ಚಕ್ರತಾಳದಲ್ಲಿ ನವೀನಕೃಷ್ಣ ಮತ್ತು ಸಾತ್ವಿಕ್ ವಿ ನಾಯಕ್ ಮತ್ತು ನಿರೂಪಕಿಯಗಿ ದೇವಿಕಾ ಕುರಿಯಾಜೆ ತಮ್ಮ ಸಹಕಾರವನ್ನು ನೀಡಿರುತ್ತಾರೆ. ಈ ಕಾರ್ಯಕ್ರಮದ ಸಾಹಿತ್ಯ ಮತ್ತು ನಿರ್ದೇಶನವನ್ನು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ವಿ ಶೆಟ್ಟಿಗಾರ್ ,ಸಮನ್ವಯ ಮತ್ತು ಸಂಕಲನಕಾರರಾಗಿ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಅಜಯಶಾಸ್ತ್ರಿ ನಿರ್ವಹಿಸಿರುತ್ತಾರೆ. ಇದರ ಜೊತೆಗೆ ವಿವೇಕಾನಂದ ಪದವಿ ಕಾಲೇಜಿನ ವಿಕಸನ ಸ್ಟುಡಿಯೋ ಈ ಕಾರ್ಯಕ್ರಮಕ್ಕೆ ಸಂಪುರ್ಣ ಸಹಕಾರವನ್ನು ನೀಡಿದೆ.

ನಿಗದಿಪಡಿಸಲಾದ ಸಮಯದಲ್ಲಿ http://youtu.be/lr7i3SKQCBo ಲಿಂಕ್ ಓಪನ್ ಮಾಡುವ ಮೂಲಕ ಈ ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶವಿದೆ. ಅದೇ ರೀತಿ ಯುಟ್ಯೂಬ್‌ನಲ್ಲಿ Vpuc Puttur ಎಂದು ಸರ್ಚ್ ಮಾಡಿದರೂ ಆಯ್ಕೆ ಲಭ್ಯವಿರುತ್ತದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

14 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

14 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago