ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ – ಗುತ್ತಿಗಾರು ಇವರ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ಭಾನುವಾರ ನಾಗವೃಜ ಕ್ಷೇತ್ರ ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಶ್ರೀದೇವಿಲಲಿತೋಪಾಖ್ಯಾನ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ಇದೇ ಸಂದರ್ಭದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರ ವತಿಯಿಂದ ಹಿರಿಯ ಯಕ್ಷಗಾನ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಅವರನ್ನು ಸನ್ಮಾನಿಸಲಾಯಿತು.
ಇದೇ ವೇಳೆ ಪಾವಂಜೆ ಮೇಳದ ಮುಖ್ಯಸ್ಥರು ಹಾಗೂ ಖ್ಯಾತ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರನ್ನು ಗೌರವಿಸಲಾಯಿತು. ಕೃತಕ ಕಾಲಿನಿಂದಲೇ ಯಕ್ಷಗಾನ ರಂಗದಲ್ಲಿ ಮಿಂಚುತ್ತಿರುವ ಪಾವಂಜೆ ಮೇಳದ ಕಲಾವಿದ ಮನೋಜ್ ವೇಣೂರು ಅವರನ್ನು ಗುರುತಿಸಲಾಯಿತು. ಇದೇ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಟ್ರಸ್ಟ್ಗೆ ಸಂಘಟಕರ ವತಿಯಿಂದ ಧನಸಹಾಯ ಹಸ್ತಾಂತರಿಸಲಾಯಿತು. ವೆಂಕಟೇಶ್ ಪುಚ್ಛಪ್ಪಾಡಿ ಇದನ್ನು ಹಸ್ತಾಂತರಿಸಿದರು.
ಅಗಲಿದ ಬಲಿಪ ನಾರಾಯಣ ಭಾಗವತರಿಗೆ ಡಾ. ವಿಷ್ಣುಪ್ರಸನ್ನ ಬರಕೆರೆ ಅವರು ನುಡಿನಮನ ಸಲ್ಲಿಸಿದರು.
ಈ ಸಂದರ್ಭ ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ, ಸಂಘಟಕರಾದ ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ, ಗಂಗಾಧರ ಪುಚ್ಚಪ್ಪಾಡಿ, ಸತ್ಯನಾರಾಯಣ ಹೊನ್ನಡಿ, ಸತ್ಯನಾರಾಯಣ ಮಾತೃಮಜಲು, ಕೃಷ್ಣ ಭಟ್ ಹೊನ್ನಡಿ , ಮಹೇಶ್ ಪುಚ್ಛಪ್ಪಾಡಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಪರ್ಣಾ ಪುಚ್ಛಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…