Advertisement
ಕಲೆ-ಸಂಸ್ಕೃತಿ

ಯಕ್ಷಗಾನ ಭಾಗವತ ದಿನೇಶ ಅಮ್ಮಣ್ಣಾಯರಿಗೆ ‘ಶ್ರೀ ಯಕ್ಷಾಂಜನೇಯ ಪ್ರಶಸ್ತಿ’

Share

ಪುತ್ತೂರು ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘವು ಆಯೋಜಿಸುವ ‘ಶ್ರೀ ಯಕ್ಷಾಂಜನೇಯ ಪ್ರಶಸ್ತಿ’ಗೆ ಹಿರಿಯ ಭಾಗವತ  ದಿನೇಶ ಅಮ್ಮಣ್ಣಾಯರು ಭಾಜನರಾಗಿದ್ದಾರೆ. 2022 ದಶಂಬರ 25, ಭಾನುವಾರ ಸಂಜೆ ಗಂಟೆ 5ಕ್ಕೆ ಜರಗುವ ‘ಶ್ರೀ ಆಂಜನೇಯ 49’ ವಾರ್ಷಿಕ ಕಲಾಪದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅಮ್ಮಣ್ಣಾಯರಿಗೆ ಪ್ರಶಸ್ತಿಯನ್ನು ಪ್ರದಾನಿಸಲಾಗುವುದು ಎಂದು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ  ಭಾಸ್ಕರ ಬಾರ್ಯ ತಿಳಿಸಿದ್ದಾರೆ.

ದಿನೇಶ ಅಮ್ಮಣ್ಣಾಯರು ‘ರಸರಾಗ ಚಕ್ರವರ್ತಿ’ ಬಿರುದಾಂಕಿತ ಭಾಗವತ. ಕೀರ್ತಿಶೇಷ ಭಾಗವತ ದಾಮೋದರ ಮಂಡೆಚ್ಚರ ಉತ್ತರಾಧಿಕಾರಿಯಾಗಿ ಕರ್ನಾಟಕ ಮೇಳದಲ್ಲಿ ಹೊರಹೊಮ್ಮಿದವರು. ಇಪ್ಪತ್ತೊಂದು ವರುಷ ಕರ್ನಾಟಕ ಮೇಳವೂ ಸೇರಿದಂತೆ ಪುತ್ತೂರು ಮೇಳ, ಕುಂಟಾರು ಮೇಳ, ಕದ್ರಿ ಮೇಳ, ಶ್ರೀ ಎಡನೀರು ಮೇಳಗಳಲ್ಲಿ ವ್ಯವಸಾಯ ಮಾಡಿದ್ದಾರೆ.
‘ಮಾ ನಿಷಾದ, ಭಕ್ತ ಸುಧಾಮ, ಪಾಂಚಜನ್ಯ, ಅಕ್ಷಯಾಂಬರ, ಸತ್ಯಹರಿಶ್ಚಂದ್ರ, ನಳದಮಯಂತಿ..’ ಮೊದಲಾದ ಪ್ರಸಂಗಗಳ ಹಾಡುಗಳಲ್ಲಿ ರಸ-ಭಾವಗಳು ಮರುಹುಟ್ಟು ಪಡೆಯುತ್ತವೆ. ತುಳು ಪ್ರಸಂಗಗಳ ರಂಗ ಸಂಭ್ರಮದ ಕಾಲಘಟ್ಟದಲ್ಲಿ ಅಮ್ಮಣ್ಣಾಯರ ಗಾಯನಕ್ಕೆ ಪ್ರತ್ಯೇಕವಾದ ಗಾನಸುಖ. ದಾಮೋದರ ಮಂಡೆಚ್ಚರ ನೆರಳಿನಲ್ಲಿ ಮೇಲ್ಮೆ ಕಂಡ ಇವರ ಗಾಯನ ಮಾರ್ಗವು ‘ಅಮ್ಮಣ್ಣಾಯ ಶೈಲಿ’ಯಾಗಿ ರೂಪುಗೊಂಡಿದೆ. ಅಮ್ಮಣ್ಣಾಯರ ಪದ್ಯಶೈಲಿಗೆ ದೊಡ್ಡ ಅಭಿಮಾನಿ ಗಡಣವಿರುವುದು ಅವರ ಕಲಾಯಾನದ ದ್ಯೋತಕ ಹಾಗೂ ಗೌರವ ಎಂದು  ಭಾಸ್ಕರ ಬಾರ್ಯ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

8 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

8 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 days ago