Advertisement
ಕಲೆ-ಸಂಸ್ಕೃತಿ

ಯಕ್ಷಗಾನ ಭಾಗವತ ದಿನೇಶ ಅಮ್ಮಣ್ಣಾಯರಿಗೆ ‘ಶ್ರೀ ಯಕ್ಷಾಂಜನೇಯ ಪ್ರಶಸ್ತಿ’

Share

ಪುತ್ತೂರು ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘವು ಆಯೋಜಿಸುವ ‘ಶ್ರೀ ಯಕ್ಷಾಂಜನೇಯ ಪ್ರಶಸ್ತಿ’ಗೆ ಹಿರಿಯ ಭಾಗವತ  ದಿನೇಶ ಅಮ್ಮಣ್ಣಾಯರು ಭಾಜನರಾಗಿದ್ದಾರೆ. 2022 ದಶಂಬರ 25, ಭಾನುವಾರ ಸಂಜೆ ಗಂಟೆ 5ಕ್ಕೆ ಜರಗುವ ‘ಶ್ರೀ ಆಂಜನೇಯ 49’ ವಾರ್ಷಿಕ ಕಲಾಪದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅಮ್ಮಣ್ಣಾಯರಿಗೆ ಪ್ರಶಸ್ತಿಯನ್ನು ಪ್ರದಾನಿಸಲಾಗುವುದು ಎಂದು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ  ಭಾಸ್ಕರ ಬಾರ್ಯ ತಿಳಿಸಿದ್ದಾರೆ.

ದಿನೇಶ ಅಮ್ಮಣ್ಣಾಯರು ‘ರಸರಾಗ ಚಕ್ರವರ್ತಿ’ ಬಿರುದಾಂಕಿತ ಭಾಗವತ. ಕೀರ್ತಿಶೇಷ ಭಾಗವತ ದಾಮೋದರ ಮಂಡೆಚ್ಚರ ಉತ್ತರಾಧಿಕಾರಿಯಾಗಿ ಕರ್ನಾಟಕ ಮೇಳದಲ್ಲಿ ಹೊರಹೊಮ್ಮಿದವರು. ಇಪ್ಪತ್ತೊಂದು ವರುಷ ಕರ್ನಾಟಕ ಮೇಳವೂ ಸೇರಿದಂತೆ ಪುತ್ತೂರು ಮೇಳ, ಕುಂಟಾರು ಮೇಳ, ಕದ್ರಿ ಮೇಳ, ಶ್ರೀ ಎಡನೀರು ಮೇಳಗಳಲ್ಲಿ ವ್ಯವಸಾಯ ಮಾಡಿದ್ದಾರೆ.
‘ಮಾ ನಿಷಾದ, ಭಕ್ತ ಸುಧಾಮ, ಪಾಂಚಜನ್ಯ, ಅಕ್ಷಯಾಂಬರ, ಸತ್ಯಹರಿಶ್ಚಂದ್ರ, ನಳದಮಯಂತಿ..’ ಮೊದಲಾದ ಪ್ರಸಂಗಗಳ ಹಾಡುಗಳಲ್ಲಿ ರಸ-ಭಾವಗಳು ಮರುಹುಟ್ಟು ಪಡೆಯುತ್ತವೆ. ತುಳು ಪ್ರಸಂಗಗಳ ರಂಗ ಸಂಭ್ರಮದ ಕಾಲಘಟ್ಟದಲ್ಲಿ ಅಮ್ಮಣ್ಣಾಯರ ಗಾಯನಕ್ಕೆ ಪ್ರತ್ಯೇಕವಾದ ಗಾನಸುಖ. ದಾಮೋದರ ಮಂಡೆಚ್ಚರ ನೆರಳಿನಲ್ಲಿ ಮೇಲ್ಮೆ ಕಂಡ ಇವರ ಗಾಯನ ಮಾರ್ಗವು ‘ಅಮ್ಮಣ್ಣಾಯ ಶೈಲಿ’ಯಾಗಿ ರೂಪುಗೊಂಡಿದೆ. ಅಮ್ಮಣ್ಣಾಯರ ಪದ್ಯಶೈಲಿಗೆ ದೊಡ್ಡ ಅಭಿಮಾನಿ ಗಡಣವಿರುವುದು ಅವರ ಕಲಾಯಾನದ ದ್ಯೋತಕ ಹಾಗೂ ಗೌರವ ಎಂದು  ಭಾಸ್ಕರ ಬಾರ್ಯ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

6 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

7 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

8 hours ago

ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ

ಇಥೆನಾಲ್‌ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…

8 hours ago

ಅಮೆರಿಕ-ಇರಾನ್ ಯುದ್ಧ ಮತ್ತೆ ಭುಗಿಲೇ..? ಕದನ ವಿರಾಮ ಅಂತ್ಯ ಎಂದ ಟ್ರಂಪ್ – ಹೊಸ ದಾಳಿಗಳಿಂದ ಜಾಗತಿಕ ಆತಂಕ

ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…

8 hours ago

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

22 hours ago