Advertisement
ಸುದ್ದಿಗಳು

ಯಶಸ್ವಿನಿ ಯೋಜನೆಯ ನೋಂದಣಿ ದಿನಾಂಕ ವಿಸ್ತರಣೆ : ನೋಂದಣಿಗೆ ಮತ್ತೆ ಅವಕಾಶ

Share

ಯಶಸ್ವಿನಿ ಯೋಜನೆಯ ನೋಂದಣಿಗೆ ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು, ಮಾರ್ಚ್ 31 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಯೋಜನೆ ಅಡಿಯಲ್ಲಿ ಸರ್ಕಾರ 30 ಲಕ್ಷ ಸದಸ್ಯರನ್ನು ನೋಂದಣಿ ಮಾಡುವ ಗುರಿ ಹೊಂದಿದೆ.

ಯಶಸ್ವಿನಿ ಯೋಜನೆ ಏನಿದು ..? : ಯಶಸ್ವಿನಿ ಗ್ರಾಮೀಣ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆ. ಕರ್ನಾಟಕ ರಾಜ್ಯದ ಗ್ರಾಮೀಣ ಸಹಕಾರಿಗಳಿಗಾಗಿಯೇ ರೂಪಗೊಂಡಿರುವ ಒಂದು ಸ್ವಯಂ-ನಿಧಿ ಶಸ್ತ್ರಚಿಕಿತ್ಸಾ ಯೋಜನೆ. ಈ ಯೋಜನೆಯಡಿ ಗ್ರಾಮೀಣ ಸಹಕಾರಿಯೊಬ್ಬರು ತಿಂಗಳಿಗೆ ಇಂತಿಷ್ಟರಂತೆ ನಿಗಧಿತ ಪ್ರಮಾಣದಲ್ಲಿ ಒಂದು ವರ್ಷದ ಅವಧಿಯಲ್ಲಿ ಯೋಜನೆಯಲ್ಲಿ ಒಳಗೊಂಡ ಯಾವುದೇ ಶಸ್ತ್ರ ಚಿಕಿತ್ಸೆಯನ್ನು ನಿಗದಿತ ಮಿತಿಯೊಳಗೆ, ಷರತ್ತು ಮತ್ತು ನಿಯಮಗಳಿಗೆ ಒಳಪಟ್ಟು ಟ್ರಸ್ಟಿನಿಂದ ಅಂಗೀಕೃತ ಯಾವುದೇ ಆಸ್ಪತ್ರೆಗಳಲ್ಲಿ ನಗದುರಹಿತವಾಗಿ ಪಡೆಯಬಹುದು.

ಯೋಜನೆಯ ಫಲಾಭವಿಯಾಗಲು ಇರಬೇಕಾದ ಅರ್ಹತೆಗಳೇನು ? : ಈ ಯೋಜನೆಯ ಫಲಾನುಭವಿಯಾಗಲು ಕನಿಷ್ಟ 3 ತಿಂಗಳು ಮುಂಚಿತ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕು. ಅಲ್ಲದೇ ಗ್ರಾಮೀಣ ಸಹಕಾರ ಸಂಘ/ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು ಯೋಜನೆಯ ಫಲಾನುಭವಿಯಾಗಬಹುದು .

ಯಶಸ್ವಿನಿ ಸದಸ್ಯರಾಗಲು ಸಹಕಾರ ಕುಟುಂಬದ ಎಲ್ಲಾ ಸದಸ್ಯರು ಸದಸ್ಯತ್ವವನ್ನು ಹೊಂದಿರಬೇಕೆ ? : ಕುಟುಂಬದ ಯಾವುದೇ ಒಬ್ಬ ಸದಸ್ಯನು/ಸದಸ್ಯಳು ಮೇಲೆ ತಿಳಿಸಿರುವ ಅರ್ಹ ಸಹಕಾರ ಸಂಘದ ಸದಸ್ಯನಾಗಿ/ಳಾಗಿ ಯಶಸ್ವಿನಿ ವರ್ಷದ ಮೊದಲ ದಿನ ಅಂದರೆ 01.06.2024ಕ್ಕೆ ಮೂರು ತಿಂಗಳಾಗಿದ್ದಲ್ಲಿ, ಕುಟುಂಬದ ಪ್ರತಿಯೊಬ್ಬ ಸದಸ್ಯನೂ ನಿಗದಿತ ಅವಧಿಯಲ್ಲಿ ವಾರ್ಷಿಕ ವಂತಿಗೆ ಸಲ್ಲಿಸುವ ಮೂಲಕ ಯಶಸ್ವಿನಿ ಯೋಜನೆಯ ಸೌಲಭ್ಯ ಪಡೆಯಬಹುದು.

ಫಲಾನುಭವಿತ್ವ ಬಯಸುವವರು ಪಾವತಿಸಬೇಕಾದ ವಂತಿಗೆ ಹಣ ಎಷ್ಟು ? : ಫಲಾನುಭವಿಯಾಗಬಯಸುವ ಪ್ರತಿಯೊಬ್ಬರೂ ವರ್ಷಕ್ಕೆ ನಿಗದಿತ ಪ್ರಮಾಣದ ವಂತಿಗೆ ಹಣ ನೀಡಬೇಕು. ವಾರ್ಷಿಕ ವಂತಿಗೆ ರೂ.250/- ಆಗಿರುತ್ತದೆ.ಒಂದೇ ಕುಟುಂಬದ 5 ಅಥವಾ 5 ಕ್ಕಿಂತ ಹೆಚ್ಚು ಸದಸ್ಯರು ನೊಂದಣಿಯಾದಲ್ಲಿ ವಂತಿಗೆಯಲ್ಲಿ ಶೇ.15 ರಿಯಾಯಿತಿ ಇರುತ್ತದೆ .

ಶಸ್ತ್ರಚಿಕಿತ್ಸೆ ಪಡೆದ ಫಲಾನುಭವಿಗಳ ಬಿಲ್ಲಿನ ಪಾವತಿ ಹೇಗೆ ಆಗುತ್ತದೆ ?: ಯಶಸ್ವಿನಿ ಫಲಾನುಭವಿಗಳು,  ಆಸ್ಪತ್ರೆ ಬಿಲ್ಲಿನ ಹಣವನ್ನು ಪಾವತಿ ಮಾಡಬೇಕಾಗಿಲ್ಲ. ಆಸ್ಪತ್ರೆಯವರು ಚಿಕಿತ್ಸಾ ಪೂರ್ವಾನುಮತಿಯಲ್ಲಿ ಮಂಜೂರು ಮಾಡಿದ ಮೊತ್ತಕ್ಕೆ ಬಿಲ್ಲನ್ನು ಅನುಷ್ಟಾನ ಸಂಸ್ಥೆಗೆ ಕಳಿಸುವರು. ಅನುಷ್ಟಾನ ಸಂಸ್ಥೆ ಯವರು ಬಿಲ್ಲನ್ನು ಪರಿಶೀಲನೆ ಮಾಡಿ ಅವು ಯೋಜನೆಯ ಪ್ರಕಾರ ಇದ್ದಲ್ಲಿ ಅವುಗಳನ್ನು ಪಾಸು ಮಾಡಲು ಯಶಸ್ವಿನಿ ಟ್ರಸ್ಟಗೆ ಕಳಿಸುವರು. ಯಶಸ್ವಿನಿ ಟ್ರಸ್ಟ್ ಆಸ್ಪತ್ರೆಗಳ ಬಿಲ್ಲನ್ನು ಮಂಜೂರು ಮಾಡಿದ ನಂತರ ಬಿಲ್ಲಿನ ಮೊತ್ತವನ್ನು ಅನುಷ್ಟಾನ ಸಂಸ್ಥೆಯ ಮೂಲಕ ಆಸ್ಪತ್ರೆಗೆ ಪಾವತಿಸಲಾಗುವುದು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

2 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

11 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

12 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

12 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

19 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

24 hours ago