ರೈತರು/ಸಹಕಾರಿ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಇಂದಿನಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭವಾಗಲಿದೆ. ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆ ಜನವರಿ 1 ರಿಂದ ಜಾರಿಗೆ ಬರಲಿದ್ದು, ರಾಜ್ಯದ ಸಹಕಾರ ಸಂಘಗಳ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ಲಾಭ ದೊರೆಯಲಿದೆ.
ರಾಜ್ಯದ ಸಹಕಾರಿ ಸಂಘದ ಸದಸ್ಯರು ತಮ್ಮ ಸಹಕಾರಿ ಸಂಘಗಳ ಮೂಲಕ ನಿಗದಿತ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕು.ನೋಂದಣಿ ಮಾಡಿಕೊಂಡ ನಂತರ ಸಹಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ನೆಟ್ ವರ್ಕ್ ವ್ಯಾಪ್ತಿಯ ಯಾವುದೇ ಆಸ್ಪತ್ರೆಯಲ್ಲಿ ವಾರ್ಷಿಕ ಗರಿಷ್ಠ 5 ಲಕ್ಷ ರೂ.ವರೆಗೆ ಚಿಕಿತ್ಸೆ ಪಡೆಯಬಹುದು.
ಸದಸ್ಯರಿಗೆ 2023 ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿ ನಂತರ ಮತ್ತೆ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.