Advertisement
ಸುದ್ದಿಗಳು

ಉಗ್ರಸ್ವರೂಪ ಪಡೆದ ಚಂಡಮಾರುತ ಬಿಪೊರ್‌ ಜೊಯ್‌ | ಗುಜರಾತ್‌ ಗೂ ಅಪ್ಪಳಿಸಲಿದೆ ಚಂಡಮಾರುತ |

Share

ಅರಬ್ಬಿ ಸಮು​ದ್ರ​ದಲ್ಲಿ ಸೃಷ್ಟಿ​ಯಾ​ದ  ಬಿಪೊರ್‌ಜೊ​ಯ್‌ ಇದೀಗ ತೀವ್ರ ಸ್ವರೂ​ಪದೊಂದಿಗೆ  ಗುಜ​ರಾ​ತ್‌ನ ಕಛ್‌ ಹಾಗೂ ಪಾಕಿ​ಸ್ತಾ​ನದ ಕರಾಚಿ ನಡುವೆ ಜೂನ್ 15ರ ವೇಳೆಗೆ ಅಪ್ಪ​ಳಿ​ಸುವ ಸಾಧ್ಯತೆ ಇದೆ ಎಂದು ಭಾರ​ತೀ​ಯ ಹವಾ​ಮಾನ ಇಲಾಖೆ  ಹೇಳಿ​ದೆ. 

ಎರಡನೇ ಹಂತದ ಚಂಡಮಾರುತ ಎಚ್ಚರಿಕೆಯನ್ನು ಕರಾವಳಿ ಪ್ರದೇಶಗಳಲ್ಲಿ ಪ್ರತಿಕೂಲ ಹವಾಮಾನದ ಎಚ್ಚರಿಕೆಯನ್ನು ನೀಡಲಾಗಿದೆ. ಬೈಪಾರ್ಜೋಯ್ ಪೂರ್ವ ಮಧ್ಯ ಅರೇಬಿಯನ್ ಸಮುದ್ರದಲ್ಲಿ ಜೂನ್ 11 ರಂದು ಚಲಿಸಿ ಜೂನ್ 15 ರ ಮಧ್ಯಾಹ್ನದ ವೇಳೆಗೆ ಮಾಂಡ್ವಿ (ಗುಜರಾತ್) ಮತ್ತು ಕರಾಚಿ (ಪಾಕಿಸ್ತಾನ) ನಡುವೆ ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬಂಗಾಳಿ ಭಾಷೆ​ಯಲ್ಲಿ ಚಂಡ​ಮಾ​ರು​ತ​ಕ್ಕೆ ‘ಬಿ​ಪೊ​ರ್‌​ಜೊ​ಯ್‌’  ಎಂದು ಹೆಸ​ರಿ​ಡ​ಲಾ​ಗಿದೆ. ಭಾನು​ವಾರ  ಗುಜ​ರಾ​ತ್‌ನ ಪೋರ​ಬಂದ​ರ್‌​ನಿಂದ 480 ಕಿ.ಮೀ. ದೂರದ ನೈಋತ್ಯ ಭಾಗ​ದಲ್ಲಿ ಕೇಂದ್ರೀ​ಕೃ​ತ​ವಾ​ಗಿ​ತ್ತು. ಅದು ಉತ್ತರ ಭಾಗ​ದತ್ತ ಚಲಿ​ಸ​ಲಿದ್ದು, ಜೂನ್ 15ರ ವೇಳೆಗೆ ಸೌರಾಷ್ಟ್ರ ಹಾಗೂ ಕಛ್‌ ಮತ್ತು ಪಾಕಿ​ಸ್ತಾನದ ಕರಾಚಿ ಕರಾ​ವ​ಳಿ​ಗಳ ಮಧ್ಯ ಗಂಟೆಗೆ 125ರಿಂದ 150 ಕಿ.ಮೀ. ವೇಗದ ಬಿರು​ಗಾ​ಳಿ​ಯೊಂದಿ​ಗೆ ಅಪ್ಪ​ಳಿ​ಸ​ಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

4 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

7 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

19 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

19 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago