Advertisement
ಸುದ್ದಿಗಳು

ಕಲ್ಲು ತೂರುವ ಮುನ್ನ ಎಚ್ಚರ | ವಂದೇ ಭಾರತ್ ರೈಲಿಗೆ ಹಾನಿ ಮಾಡಿದರೆ 5 ವರ್ಷ ಜೈಲು ಶಿಕ್ಷೆ ಗ್ಯಾರಂಟಿ |

Share

ವಂದೇ ಭಾರತ್ ರೈಲಿನ ಕಿಟಕಿ ಗಾಜುಗಳಿಗೆ ಕಲ್ಲು ತೂರಾಟ  ನಡೆಸಿ ಹಾನಿ ಮಾಡಿದ್ದಕ್ಕಾಗಿ ತಮಿಳುನಾಡಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುಮಂಜೋಲೈ ಮೂಲದ 21 ವರ್ಷದ ಯುವಕ ಗುಬೇಂದ್ರನ್ಎಂಬುವವನೇ ವಂದೇ ಭಾರತ್ ರೈಲಿನ ಕಿಟಕಿಯ ಗಾಜಿನ ಮೇಲೆ ಕಲ್ಲು ತೂರಾಟ ನಡೆಸಿದವನಾಗಿದ್ದಾನೆ. ವಂದೇ ಭಾರತ್ ರೈಲು ಚೆನ್ನೈನಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಪುದೂರು ಬಳಿ ಕಿಟಕಿ ಗಾಜು ಒಡೆದಿರುವುದನ್ನು ಗಮನಿಸಿದ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಪೊಲೀಸರು ತನಿಖೆ ಕೈಗೊಂಡು ರೈಲ್ವೆ ಹಳಿ ಬಳಿ ಮದ್ಯ ಸೇವಿಸುತ್ತಿದ್ದ ಗುಬೇಂದ್ರನ್‌ನನ್ನು ಬಂಧಿಸಿದ್ದಾರೆ. ಇನ್ನು ಆರೋಪಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ನಡೆಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಕಲ್ಲು ತೂರಾಟ ನಡೆಸಿ ಹಾನಿ ಮಾಡಿದರೆ 5 ವರ್ಷ ಜೈಲು ! : ಈ ಮಧ್ಯೆ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸುವುದು, ಹಾನಿ ಮಾಡುವುದು ಸೇರಿದಂತೆ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ದಕ್ಷಿಣ ಮಧ್ಯ ರೈಲ್ವೆ (ಎಸ್‌ಸಿಆರ್)ಸಾರ್ವಜನಿಕರಿಗೆ ಮನವಿ ಮಾಡಿದೆ. ಅಲ್ಲದೇ ಇಂಥ ಅಪರಾಧಕ್ಕೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ರೈಲುಗಳ ಮೇಲೆ ಕಲ್ಲು ತೂರಾಟವು ಕ್ರಿಮಿನಲ್ ಅಪರಾಧವಾಗಿದ್ದು, ಅಪರಾಧಿಗಳ ವಿರುದ್ಧ ರೈಲ್ವೆ ಕಾಯ್ದೆಯ ಸೆಕ್ಷನ್ 153 ರ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಇದು 5 ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಗೆ ಗುರಿಯಾಗುತ್ತದೆ ಎಂದು ಎಸ್‌ಸಿಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.‌ ಇನ್ನು, ತೆಲಂಗಾಣದ ವಿವಿಧ ಸ್ಥಳಗಳಲ್ಲಿ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಹಲವಾರು ಘಟನೆಗಳು ವರದಿಯಾದ ನಂತರ ಈ ಎಚ್ಚರಿಕೆ ನೀಡಲಾಗಿದೆ.

ವಂದೇ ಭಾರತ್ರೈಲನ್ನು ಗುರಿಯಾಗಿಸಿಕೊಂಡ ಕಿಡಿಗೇಡಿಗಳು ! : ಇತ್ತೀಚಿನ ದಿನಗಳಲ್ಲಿ ವಂದೇ ಭಾರತ್ ರೈಲುಗಳನ್ನು ಕಿಡಿಗೇಡಿಗಳು ಗುರಿಯಾಗಿಸಿಕೊಂಡಿದ್ದಾರೆ. ಒಂದಲ್ಲ, ಎರಡಲ್ಲ… ಅಂತಹ ಒಂಬತ್ತು ಘಟನೆಗಳು ಇದುವರೆಗೆ ನಡೆದಿವೆ. ಈ ವರ್ಷದ ಜನವರಿಯಿಂದ ವರದಿಯಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಫೆಬ್ರವರಿ 2019 ರಲ್ಲಿ ಪ್ರಾರಂಭವಾದಾಗಿನಿಂದ, ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ತೆಲಂಗಾಣ, ಬಿಹಾರ, ಉತ್ತರ ಪ್ರದೇಶ, ಛತ್ತೀಸ್‌ಗಢ ಮತ್ತು ಪಶ್ಚಿಮ ಬಂಗಾಳದಲ್ಲಿ ದಾಳಿ ಮಾಡಲಾಗಿದೆ. ಹಲವಾರು ಪ್ರಕರಣಗಳನ್ನು ದಾಖಲಿಸಿದ ನಂತರ ಇದುವರೆಗೆ 39 ಜನರನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಬಂಧಿಸಿದೆ.

ಜಾಗೃತಿ ಅಭಿಯಾನ : ಈ ಕುರಿತು ರೈಲ್ವೇ ಸಂರಕ್ಷಣಾ ಪಡೆ (ಆರ್‌ಪಿಎಫ್) ಹಲವಾರು ಜಾಗೃತಿ ಅಭಿಯಾನಗಳನ್ನು ನಡೆಸುತ್ತಿದೆ. ಹಳಿಗಳ ಸಮೀಪವಿರುವ ಗ್ರಾಮಗಳ ಸರಪಂಚರೊಂದಿಗೆ ಸಮನ್ವಯ ಸಾಧಿಸುವುದು ಮತ್ತು ಅವರನ್ನು ಗ್ರಾಮ ಮಿತ್ರರನ್ನಾಗಿ ಮಾಡುವುದು ಸೇರಿದಂತೆ ಹಲವಾರು ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಎಸ್‌ಸಿಆರ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಿ.ಎಚ್ ರಾಕೇಶ್ ತಿಳಿಸಿದ್ದಾರೆ.

ಮೊದಲು ರಾಜಧಾನಿ ಎಕ್ಸ್‌ಪ್ರೆಸ್‌ , ಶತಾಬ್ದಿ ಎಕ್ಸ್‌ಪ್ರೆಸ್‌ ಗಳಿಗೆ ಮಾಡುವಂತೆಯೇ ಈಗ ವಂದೇ ಭಾರತ್‌ ರೈಲನ್ನು ಗುರಿಯಾಗಿಸಿಕೊಂಡಿದ್ದಾರೆ. ಮಾರ್ಚ್ 11 ರಂದು, ಹೌರಾ-ಹೊಸ ಜಲಪೈಗುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಲಾಗಿತ್ತು. ಅದರ ಕೋಚ್‌ಗಳಲ್ಲಿ ಒಂದರ ಕಿಟಕಿ ಗಾಜುಗಳನ್ನು ಹಾನಿಗೊಳಿಸಲಾಗಿತ್ತು.

“ಇಂತಹ ನಾಚಿಕೆಗೇಡಿನ, ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟವು ರಾಜಕೀಯ ರಾಜಕೀಯಪ್ರೇರಿತವಲ್ಲ ಎನ್ನಲಾಗದು. ನೀವೂ ರಾಷ್ಟ್ರಕ್ಕೆ ಒಳ್ಳೆಯದನ್ನು ಮಾಡುವುದಿಲ್ಲ; ಒಳ್ಳೆಯದನ್ನು ಮಾಡಲು ಬೇರೆ ಯಾರಿಗೂ ಅವಕಾಶ ನೀಡುವುದಿಲ್ಲ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ ಅವರು ಪಶ್ಚಿಮ ಬಂಗಾಳ ದಾಳಿಯ ಬಗ್ಗೆ ಟ್ವೀಟ್ ಮಾಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

2 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

5 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

17 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

17 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago