ಬಯಲುಸೀಮೆಯ ಜಿಲ್ಲೆಗಳಿಗೆ ನೀರುಣಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದೊಳಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಅವರು, ತುಮಕೂರಿನ ಕೊರಟಗೆರೆ ಹಾಗೂ ದೊಡ್ಡಬಳ್ಳಾಪುರದ ಸಾಸಲು ಹೋಬಳಿ ಹಾಗೂ ಕುಂದಾಣದ ಬಳಿ ನೀರು ಶೇಖರಣೆ ಆಗಲಿದೆ, ಅಲ್ಲಿಂದ ನೀರನ್ನು ಪಂಪ್ ಮಾಡಲಾಗುತ್ತದೆ ಎಂದರು. ಜಿಲ್ಲೆಯ ಈ ಭಾಗಕ್ಕೆ ಕೆ.ಸಿ ವ್ಯಾಲಿ, ಎಚ್ಎನ್ ವ್ಯಾಲಿ, ಎತ್ತಿನಹೊಳೆ ನೀರು ಬರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ಕೃಷಿ ಚಟುವಟಿಕೆ ಕೈಗೊಳ್ಳಲು ಸಹಾಯಕವಾಗಲಿದೆ ಎಂದು ಸಚಿವರು ತಿಳಿಸಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…