ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2ನೇ ಬಾರಿ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.
ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಯೋಗಿ ಅಧಿಕಾರದ ಗದ್ದುಗೆ ಏರಿದರು. ಡೆಪ್ಯೂಟಿ ಸಿಎಂಗಳಾಗಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಿಜೇಶ್ ಪಾಟಕ್ ಪ್ರಮಾಣ ವಚನ ಸ್ವೀಕರಿಸಿದರು.ಇವರೊಂದಿಗೆ 47 ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಅಮಿತ್ ಶಾ ಭಾಗಿಯಾಗಿದ್ದರು. ಇವರೊಂದಿಗೆ ವಿವಿಧ ರಾಜ್ಯಗಳ ಬಿಜೆಪಿ ಸಿಎಂಗಳೂ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ, ಉದ್ಯಮಿಗಳು, ಬಾಲಿವುಡ್ ನಟ, ನಟಿಯರು ಭಾಗವಹಿಸಿದ್ದು, ವಿಶೇಷವಾಗಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರತಂಡ ಭಾಗಿಯಾಗಿತ್ತು.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…