Advertisement
ಸುದ್ದಿಗಳು

ಚೀನೀ ಆ್ಯಪ್​ಗಳಿಂದ ಮೋಸ ಹೋದಿರಿ ಜೋಕೆ | ಮಂಗಳೂರು ಪೊಲೀಸ್ ಆಯುಕ್ತರ ಸೂಚನೆ |

Share

ಜನ ಮೋಸ ಹೋಗುವವರೆಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ. ಅದರಲ್ಲೂ ಈ ಚೀನಿ#Chineseಯರು ಇತರ ದೇಶದ ಜನರನ್ನು ಮಂಗ ಮಾಡೋದ್ರಲ್ಲಿ ಎತ್ತಿದ ಕೈ. ಚೀನಾ ದೇಶ ತಂತ್ರಜ್ಞಾನ#Technologyದಲ್ಲಿ ಪವರ್ಫುಲ್ ದೇಶ. ಗ್ಯಾಜೆಟ್ ಐಟಂ ತಯಾರಿಸುದಲ್ಲಿ ಮುಂಚೂಣಿಯಲ್ಲಿದೆ. ಹಾಗೆ ಇದೇ ಅಸ್ತ್ರದೊಂದಿಗೆ ಇತರರನ್ನು ದೋಚುವ ಕೆಲಸವನ್ನು ಚೆನ್ನಾಗಿ ಮಾಡುತ್ತಿದೆ. ಪ್ರಪಂಚದಲ್ಲಿ ಯಾವತ್ತಿದ್ದರೂ ಚೀನಾ ಮೋಸಕ್ಕೆ ಹೆಸರುವಾಸಿ. ಹಾಗಾಗಿ ಚೀನಾ ಅಪ್ ಗಳನ್ನು ಬಳಸುವಾಗ ಎಚ್ಚರ.

ಸಾಮಾಜಿಕ ಜಾಲತಾಣದಲ್ಲಿ ಸಾಲ ಕೊಡುವ ಆ್ಯಪ್​ ಗಳು ಹೆಚ್ಚಾಗಿವೆ. ಕಡಿಮೆ ಬಡ್ಡಿಗೆ ಹಣ ಸಿಗುತ್ತೆ ಅಂತ ಜನ ಮೋಸ ಹೋಗ್ತಾ ಇದ್ದಾರೆ. ಅದರಲ್ಲೂ ಚೀನೀ ಆ್ಯಪ್​ಗಳನ್ನು ಡೌನ್‍ಲೋಡ್ ಮಾಡಿಕೊಂಡು ಮೋಸ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಸಾಲದ ಆ್ಯಪ್​ಗಳಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಚೀನೀ ಆ್ಯಪ್​ಗಳಿಂದ ಎಚ್ಚರದಿಂದ ಇರಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

Advertisement
ಚೀನೀ ಆ್ಯಪ್​ಗಳಿಂದ ಮೋಸ : ಜನರಿಗೆ ಚೀನೀ ಆಪ್ ಗಳಿಂದ ಸರಿಯಾದ ಮಾಹಿತಿ ಸಿಗದೇ ಅಪ್ಲಿಕೇಶ್‍ಗಳನ್ನು ಡೌನ್‍ಲೋಡ್ ಮಾಡಿ ಮೋಸ ಹೋಗ್ತಾ ಇದ್ದಾರೆ. ಚೀನೀ ಆ್ಯಪ್​ಗಳು ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಮತ್ತು ಆಕರ್ಷಕ ಮರುಪಾವತಿ ಆಯ್ಕೆಗಳಲ್ಲಿ ಸಾಲಗಳನ್ನು ನೀಡುವುದಾಗಿ ಜಾಹೀರಾತು ನೀಡಿ ಜನರಿಗೆ ವಂಚಿಸುತ್ತಿವೆ.

ಟ್ರ್ಯ್ರಾಪ್ ಕಾಲ್ : ವೀಡಿಯೊ ಕಾಲ್ ಮತ್ತು ಇಂಟರ್ನೆಟ್ ಕಾಲ್ ಮೂಲಕ ಜನರನ್ನು ಚೀನೀ ಆ್ಯಪ್​ಗಳು ಸಾಲದ ಬಲೆಗೆ ಬೀಳಿಸಿಕೊಳ್ಳುತ್ತಿವೆ. ಅವರು ಮಾನ್ಯತೆ ಪಡೆದ ಹಣಕಾಸು ಏಜೆನ್ಸಿಗಳಿಂದ ಮಾತನಾಡಿದಂತೆ ಮಾಡಿ ಜನರನ್ನು ನಂಬಿಸುತ್ತಾರೆ. ನಂತರ ಸಾಲ ಕೊಡುವ ನೆಪದಲ್ಲಿ ಬ್ಯಾಂಕ್ ಖಾತೆ ಸಂಖ್ಯೆ, ಭಾವಚಿತ್ರಗಳು ಸೇರಿದಂತೆ ವೈಯಕ್ತಿಕ ವಿವರಗಳನ್ನು ಪಡೆಯುತ್ತಾರೆ. ಸಾಲದ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಮೊತ್ತವನ್ನು ಜಮಾ ಮಾಡಿದ ಕ್ಷಣದಿಂದಲೇ ಟ್ರ್ಯಾಪ್ ಮಾಡಲು ಪ್ರಾರಂಭಿಸುತ್ತಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

 

Advertisement

ಜನರಿಗೆ ಬ್ಲ್ಯಾಕ್‍ಮೇಲ್ : ಸಾಲ ವಸೂಲಾತಿಗಾಗಿ ಸಂತ್ರಸ್ತರ ಕುಟುಂಬಗಳಿಗೆ ಅಶ್ಲೀಲ ಫೋಟೋಗಳನ್ನು ಕಳಿಸಿ ಬ್ಲ್ಯಾಕ್‍ಮೇಲ್ ಮಾಡ್ತಾರೆ. ಸಾಲದ ಅಪ್ಲಿಕೇಶನ್ ಸಂಸ್ಥೆಗಳು ಜನರ ವೈಯಕ್ತಿಕ ವಿವರಗಳನ್ನು ಪಡೆಯುವ ಮೂಲಕ ಸಾಲವನ್ನು ವಸೂಲಿ ಮಾಡಲು ಮುಂದಾಗುತ್ತವೆ. ಅಂತಿಮವಾಗಿ ಸಂತ್ರಸ್ತರು ಸಾಲವಾಗಿ ಪಡೆದಿದ್ದಕ್ಕಿಂತ ಹೆಚ್ಚಿನ ಹಣವನ್ನು ಮರುಪಾವತಿ ಮಾಡುತ್ತಾರೆ ಎಂದು ಜೈನ್ ಹೇಳಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ಸುಮಾರು 600 ಸಾಲದ ಅಪ್ಲಿಕೇಶನ್‍ಗಳನ್ನು ನಿಷೇಧಿಸಿದೆ. ಆದ್ರೂ ದಿನ ಹೊಸ ಹೊಸ ಆ್ಯಪ್​ಗಳು ಹುಟ್ಟಿಕೊಂಡು ಜನರನ್ನು ಮೋಸಗೊಳಿಸುತ್ತಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

3 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

10 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

12 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

13 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

13 hours ago