Advertisement
ಸುದ್ದಿಗಳು

ಚೀನೀ ಆ್ಯಪ್​ಗಳಿಂದ ಮೋಸ ಹೋದಿರಿ ಜೋಕೆ | ಮಂಗಳೂರು ಪೊಲೀಸ್ ಆಯುಕ್ತರ ಸೂಚನೆ |

Share

ಜನ ಮೋಸ ಹೋಗುವವರೆಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ. ಅದರಲ್ಲೂ ಈ ಚೀನಿ#Chineseಯರು ಇತರ ದೇಶದ ಜನರನ್ನು ಮಂಗ ಮಾಡೋದ್ರಲ್ಲಿ ಎತ್ತಿದ ಕೈ. ಚೀನಾ ದೇಶ ತಂತ್ರಜ್ಞಾನ#Technologyದಲ್ಲಿ ಪವರ್ಫುಲ್ ದೇಶ. ಗ್ಯಾಜೆಟ್ ಐಟಂ ತಯಾರಿಸುದಲ್ಲಿ ಮುಂಚೂಣಿಯಲ್ಲಿದೆ. ಹಾಗೆ ಇದೇ ಅಸ್ತ್ರದೊಂದಿಗೆ ಇತರರನ್ನು ದೋಚುವ ಕೆಲಸವನ್ನು ಚೆನ್ನಾಗಿ ಮಾಡುತ್ತಿದೆ. ಪ್ರಪಂಚದಲ್ಲಿ ಯಾವತ್ತಿದ್ದರೂ ಚೀನಾ ಮೋಸಕ್ಕೆ ಹೆಸರುವಾಸಿ. ಹಾಗಾಗಿ ಚೀನಾ ಅಪ್ ಗಳನ್ನು ಬಳಸುವಾಗ ಎಚ್ಚರ.

ಸಾಮಾಜಿಕ ಜಾಲತಾಣದಲ್ಲಿ ಸಾಲ ಕೊಡುವ ಆ್ಯಪ್​ ಗಳು ಹೆಚ್ಚಾಗಿವೆ. ಕಡಿಮೆ ಬಡ್ಡಿಗೆ ಹಣ ಸಿಗುತ್ತೆ ಅಂತ ಜನ ಮೋಸ ಹೋಗ್ತಾ ಇದ್ದಾರೆ. ಅದರಲ್ಲೂ ಚೀನೀ ಆ್ಯಪ್​ಗಳನ್ನು ಡೌನ್‍ಲೋಡ್ ಮಾಡಿಕೊಂಡು ಮೋಸ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಸಾಲದ ಆ್ಯಪ್​ಗಳಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಚೀನೀ ಆ್ಯಪ್​ಗಳಿಂದ ಎಚ್ಚರದಿಂದ ಇರಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

ಚೀನೀ ಆ್ಯಪ್​ಗಳಿಂದ ಮೋಸ : ಜನರಿಗೆ ಚೀನೀ ಆಪ್ ಗಳಿಂದ ಸರಿಯಾದ ಮಾಹಿತಿ ಸಿಗದೇ ಅಪ್ಲಿಕೇಶ್‍ಗಳನ್ನು ಡೌನ್‍ಲೋಡ್ ಮಾಡಿ ಮೋಸ ಹೋಗ್ತಾ ಇದ್ದಾರೆ. ಚೀನೀ ಆ್ಯಪ್​ಗಳು ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಮತ್ತು ಆಕರ್ಷಕ ಮರುಪಾವತಿ ಆಯ್ಕೆಗಳಲ್ಲಿ ಸಾಲಗಳನ್ನು ನೀಡುವುದಾಗಿ ಜಾಹೀರಾತು ನೀಡಿ ಜನರಿಗೆ ವಂಚಿಸುತ್ತಿವೆ.

ಟ್ರ್ಯ್ರಾಪ್ ಕಾಲ್ : ವೀಡಿಯೊ ಕಾಲ್ ಮತ್ತು ಇಂಟರ್ನೆಟ್ ಕಾಲ್ ಮೂಲಕ ಜನರನ್ನು ಚೀನೀ ಆ್ಯಪ್​ಗಳು ಸಾಲದ ಬಲೆಗೆ ಬೀಳಿಸಿಕೊಳ್ಳುತ್ತಿವೆ. ಅವರು ಮಾನ್ಯತೆ ಪಡೆದ ಹಣಕಾಸು ಏಜೆನ್ಸಿಗಳಿಂದ ಮಾತನಾಡಿದಂತೆ ಮಾಡಿ ಜನರನ್ನು ನಂಬಿಸುತ್ತಾರೆ. ನಂತರ ಸಾಲ ಕೊಡುವ ನೆಪದಲ್ಲಿ ಬ್ಯಾಂಕ್ ಖಾತೆ ಸಂಖ್ಯೆ, ಭಾವಚಿತ್ರಗಳು ಸೇರಿದಂತೆ ವೈಯಕ್ತಿಕ ವಿವರಗಳನ್ನು ಪಡೆಯುತ್ತಾರೆ. ಸಾಲದ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಮೊತ್ತವನ್ನು ಜಮಾ ಮಾಡಿದ ಕ್ಷಣದಿಂದಲೇ ಟ್ರ್ಯಾಪ್ ಮಾಡಲು ಪ್ರಾರಂಭಿಸುತ್ತಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

 

ಜನರಿಗೆ ಬ್ಲ್ಯಾಕ್‍ಮೇಲ್ : ಸಾಲ ವಸೂಲಾತಿಗಾಗಿ ಸಂತ್ರಸ್ತರ ಕುಟುಂಬಗಳಿಗೆ ಅಶ್ಲೀಲ ಫೋಟೋಗಳನ್ನು ಕಳಿಸಿ ಬ್ಲ್ಯಾಕ್‍ಮೇಲ್ ಮಾಡ್ತಾರೆ. ಸಾಲದ ಅಪ್ಲಿಕೇಶನ್ ಸಂಸ್ಥೆಗಳು ಜನರ ವೈಯಕ್ತಿಕ ವಿವರಗಳನ್ನು ಪಡೆಯುವ ಮೂಲಕ ಸಾಲವನ್ನು ವಸೂಲಿ ಮಾಡಲು ಮುಂದಾಗುತ್ತವೆ. ಅಂತಿಮವಾಗಿ ಸಂತ್ರಸ್ತರು ಸಾಲವಾಗಿ ಪಡೆದಿದ್ದಕ್ಕಿಂತ ಹೆಚ್ಚಿನ ಹಣವನ್ನು ಮರುಪಾವತಿ ಮಾಡುತ್ತಾರೆ ಎಂದು ಜೈನ್ ಹೇಳಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ಸುಮಾರು 600 ಸಾಲದ ಅಪ್ಲಿಕೇಶನ್‍ಗಳನ್ನು ನಿಷೇಧಿಸಿದೆ. ಆದ್ರೂ ದಿನ ಹೊಸ ಹೊಸ ಆ್ಯಪ್​ಗಳು ಹುಟ್ಟಿಕೊಂಡು ಜನರನ್ನು ಮೋಸಗೊಳಿಸುತ್ತಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

5 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

7 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

13 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

2 days ago