Advertisement
ಸುದ್ದಿಗಳು

ಚೀನೀ ಆ್ಯಪ್​ಗಳಿಂದ ಮೋಸ ಹೋದಿರಿ ಜೋಕೆ | ಮಂಗಳೂರು ಪೊಲೀಸ್ ಆಯುಕ್ತರ ಸೂಚನೆ |

Share

ಜನ ಮೋಸ ಹೋಗುವವರೆಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ. ಅದರಲ್ಲೂ ಈ ಚೀನಿ#Chineseಯರು ಇತರ ದೇಶದ ಜನರನ್ನು ಮಂಗ ಮಾಡೋದ್ರಲ್ಲಿ ಎತ್ತಿದ ಕೈ. ಚೀನಾ ದೇಶ ತಂತ್ರಜ್ಞಾನ#Technologyದಲ್ಲಿ ಪವರ್ಫುಲ್ ದೇಶ. ಗ್ಯಾಜೆಟ್ ಐಟಂ ತಯಾರಿಸುದಲ್ಲಿ ಮುಂಚೂಣಿಯಲ್ಲಿದೆ. ಹಾಗೆ ಇದೇ ಅಸ್ತ್ರದೊಂದಿಗೆ ಇತರರನ್ನು ದೋಚುವ ಕೆಲಸವನ್ನು ಚೆನ್ನಾಗಿ ಮಾಡುತ್ತಿದೆ. ಪ್ರಪಂಚದಲ್ಲಿ ಯಾವತ್ತಿದ್ದರೂ ಚೀನಾ ಮೋಸಕ್ಕೆ ಹೆಸರುವಾಸಿ. ಹಾಗಾಗಿ ಚೀನಾ ಅಪ್ ಗಳನ್ನು ಬಳಸುವಾಗ ಎಚ್ಚರ.

Advertisement
Advertisement

ಸಾಮಾಜಿಕ ಜಾಲತಾಣದಲ್ಲಿ ಸಾಲ ಕೊಡುವ ಆ್ಯಪ್​ ಗಳು ಹೆಚ್ಚಾಗಿವೆ. ಕಡಿಮೆ ಬಡ್ಡಿಗೆ ಹಣ ಸಿಗುತ್ತೆ ಅಂತ ಜನ ಮೋಸ ಹೋಗ್ತಾ ಇದ್ದಾರೆ. ಅದರಲ್ಲೂ ಚೀನೀ ಆ್ಯಪ್​ಗಳನ್ನು ಡೌನ್‍ಲೋಡ್ ಮಾಡಿಕೊಂಡು ಮೋಸ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಸಾಲದ ಆ್ಯಪ್​ಗಳಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಚೀನೀ ಆ್ಯಪ್​ಗಳಿಂದ ಎಚ್ಚರದಿಂದ ಇರಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

Advertisement
ಚೀನೀ ಆ್ಯಪ್​ಗಳಿಂದ ಮೋಸ : ಜನರಿಗೆ ಚೀನೀ ಆಪ್ ಗಳಿಂದ ಸರಿಯಾದ ಮಾಹಿತಿ ಸಿಗದೇ ಅಪ್ಲಿಕೇಶ್‍ಗಳನ್ನು ಡೌನ್‍ಲೋಡ್ ಮಾಡಿ ಮೋಸ ಹೋಗ್ತಾ ಇದ್ದಾರೆ. ಚೀನೀ ಆ್ಯಪ್​ಗಳು ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಮತ್ತು ಆಕರ್ಷಕ ಮರುಪಾವತಿ ಆಯ್ಕೆಗಳಲ್ಲಿ ಸಾಲಗಳನ್ನು ನೀಡುವುದಾಗಿ ಜಾಹೀರಾತು ನೀಡಿ ಜನರಿಗೆ ವಂಚಿಸುತ್ತಿವೆ.

ಟ್ರ್ಯ್ರಾಪ್ ಕಾಲ್ : ವೀಡಿಯೊ ಕಾಲ್ ಮತ್ತು ಇಂಟರ್ನೆಟ್ ಕಾಲ್ ಮೂಲಕ ಜನರನ್ನು ಚೀನೀ ಆ್ಯಪ್​ಗಳು ಸಾಲದ ಬಲೆಗೆ ಬೀಳಿಸಿಕೊಳ್ಳುತ್ತಿವೆ. ಅವರು ಮಾನ್ಯತೆ ಪಡೆದ ಹಣಕಾಸು ಏಜೆನ್ಸಿಗಳಿಂದ ಮಾತನಾಡಿದಂತೆ ಮಾಡಿ ಜನರನ್ನು ನಂಬಿಸುತ್ತಾರೆ. ನಂತರ ಸಾಲ ಕೊಡುವ ನೆಪದಲ್ಲಿ ಬ್ಯಾಂಕ್ ಖಾತೆ ಸಂಖ್ಯೆ, ಭಾವಚಿತ್ರಗಳು ಸೇರಿದಂತೆ ವೈಯಕ್ತಿಕ ವಿವರಗಳನ್ನು ಪಡೆಯುತ್ತಾರೆ. ಸಾಲದ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಮೊತ್ತವನ್ನು ಜಮಾ ಮಾಡಿದ ಕ್ಷಣದಿಂದಲೇ ಟ್ರ್ಯಾಪ್ ಮಾಡಲು ಪ್ರಾರಂಭಿಸುತ್ತಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

 

Advertisement

ಜನರಿಗೆ ಬ್ಲ್ಯಾಕ್‍ಮೇಲ್ : ಸಾಲ ವಸೂಲಾತಿಗಾಗಿ ಸಂತ್ರಸ್ತರ ಕುಟುಂಬಗಳಿಗೆ ಅಶ್ಲೀಲ ಫೋಟೋಗಳನ್ನು ಕಳಿಸಿ ಬ್ಲ್ಯಾಕ್‍ಮೇಲ್ ಮಾಡ್ತಾರೆ. ಸಾಲದ ಅಪ್ಲಿಕೇಶನ್ ಸಂಸ್ಥೆಗಳು ಜನರ ವೈಯಕ್ತಿಕ ವಿವರಗಳನ್ನು ಪಡೆಯುವ ಮೂಲಕ ಸಾಲವನ್ನು ವಸೂಲಿ ಮಾಡಲು ಮುಂದಾಗುತ್ತವೆ. ಅಂತಿಮವಾಗಿ ಸಂತ್ರಸ್ತರು ಸಾಲವಾಗಿ ಪಡೆದಿದ್ದಕ್ಕಿಂತ ಹೆಚ್ಚಿನ ಹಣವನ್ನು ಮರುಪಾವತಿ ಮಾಡುತ್ತಾರೆ ಎಂದು ಜೈನ್ ಹೇಳಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ಸುಮಾರು 600 ಸಾಲದ ಅಪ್ಲಿಕೇಶನ್‍ಗಳನ್ನು ನಿಷೇಧಿಸಿದೆ. ಆದ್ರೂ ದಿನ ಹೊಸ ಹೊಸ ಆ್ಯಪ್​ಗಳು ಹುಟ್ಟಿಕೊಂಡು ಜನರನ್ನು ಮೋಸಗೊಳಿಸುತ್ತಿವೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

4 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

5 hours ago

ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ…! |

`ಶುಗರ್ ಫ್ರೀ’(Sugar Free) ಎಂಬ ಹೆಸರಿನಲ್ಲಿ ಕೃತಕ ಸಿಹಿಕಾರಕಗಳ(Artificial sweet) ಟ್ರೆಂಡ್(Trend) ಹೆಚ್ಚುತ್ತಿರುವ…

5 hours ago

Karnataka Weather | 14-05-2024 | ಹಲವು ಕಡೆ ಗುಡಗು ಸಹಿತ ಮಳೆ ಮುಂದುವರಿಕೆ | ಮೇ.20 ರ ನಂತರ ಮಳೆ ಅಬ್ಬರ ಕಡಿಮೆ |

ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

6 hours ago

ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು ಸಾಧ್ಯವೇ?

ಕೃಷಿ ನೆಲದಲ್ಲಿ ಸಾವಯವ ಇಂಗಾಲದ(Carbon) ಕೊರತೆ ಕಾಡುತ್ತಿದೆ. ಮರಗಿಡಗಳಿಲ್ಲದೇ ಭೂಮಿಗೆ ಶಕ್ತಿ ಬರಲು…

6 hours ago