ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಮೊಮ್ಮಗಳು, ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಅವರ ಪುತ್ರಿ ಯುವ ಉದ್ಯಮಿ ಧರ್ಮಶ್ರೀ ಅವರು ಮೈಸೂರಿನಲ್ಲಿ ಸೋಮವಾರ ಆಮ್ ಆದ್ಮಿ ಪಾರ್ಟಿ ಸೇರ್ಪಡೆಯಾದರು. ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಧರ್ಮಶ್ರೀ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ಮಾತನಾಡಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಧರ್ಮಶ್ರೀ, ರಾಜ್ಯದಲ್ಲಿ ಅಭಿವೃದ್ಧಿ ಆಧಾರಿತ ರಾಜಕಾರಣ ಬೆಳೆಯಬೇಕಿದೆ. ಜಾತಿ, ಧರ್ಮಾಧಾರಿತ ರಾಜಕಾರಣಿ ಸಾಕಾಗಿದೆ. ದೆಹಲಿ ಮಾದರಿಯಲ್ಲಿ ರಾಜ್ಯವನ್ನೂ ಅಭಿವೃದ್ಧಿ ಮಾಡಲು ಸಾಧ್ಯವಿದೆ ಎಂದರು.
ಈ ಸಂದರ್ಭ ಎಎಪಿ ಮೈಸೂರು ಜಿಲ್ಲಾ ಅಧ್ಯಕ್ಷೆ ಮಾಲವಿಕಾ,ಕಾರ್ಯದರ್ಶಿ ವಿಜಯ ಶಾಸ್ತ್ರಿ ,ಮಾಧ್ಯಮ ಸಂಚಾಲಕ ವಿದ್ಯಾರಣ್ಯ ಇದ್ದರು.
ಕಾನೂನು ಪದವೀಧರರಾಗಿರುವ ಧರ್ಮಶ್ರೀ ಅವರು ಯಶಸ್ವಿ ಉದ್ಯಮಿ. ಫೋಯಲ್ ಆನ್ ವೀಲ್, ಸಂಗ್ರಾಮ್ ಸರ್ವಿಸಸ್ ಸಂಸ್ಥೆಗಳನ್ನು ಹೊಂದಿದ್ದಾರೆ. ರಿಲಯನ್ಸ್ ಗ್ರೂಪ್ನಿಂದ ಯುವ ಉದ್ಯಮಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಲಯನ್ಸ್ ಕ್ಲಬ್ ಮೂಲಕ ಸರ್ಕಾರಿ ಶಾಲೆಗಳಲ್ಲಿ ಹಲವಾರು ಸೇವಾ ಚಟುವಟಿಕೆಗಳನ್ನು ಕೈಗೊಂಡಿದ್ದಾರೆ. ಜತೆಗೆ ರಾಜೀವ್ ನಗರದ ನಿವಾಸಿಗಳಿಗೆ ಉಚಿತ ಕಾನೂನು ನೆರವು ನೀಡುತ್ತಿದ್ದಾರೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…