ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಮೊಮ್ಮಗಳು, ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಅವರ ಪುತ್ರಿ ಯುವ ಉದ್ಯಮಿ ಧರ್ಮಶ್ರೀ ಅವರು ಮೈಸೂರಿನಲ್ಲಿ ಸೋಮವಾರ ಆಮ್ ಆದ್ಮಿ ಪಾರ್ಟಿ ಸೇರ್ಪಡೆಯಾದರು. ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಧರ್ಮಶ್ರೀ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ಮಾತನಾಡಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಧರ್ಮಶ್ರೀ, ರಾಜ್ಯದಲ್ಲಿ ಅಭಿವೃದ್ಧಿ ಆಧಾರಿತ ರಾಜಕಾರಣ ಬೆಳೆಯಬೇಕಿದೆ. ಜಾತಿ, ಧರ್ಮಾಧಾರಿತ ರಾಜಕಾರಣಿ ಸಾಕಾಗಿದೆ. ದೆಹಲಿ ಮಾದರಿಯಲ್ಲಿ ರಾಜ್ಯವನ್ನೂ ಅಭಿವೃದ್ಧಿ ಮಾಡಲು ಸಾಧ್ಯವಿದೆ ಎಂದರು.
ಈ ಸಂದರ್ಭ ಎಎಪಿ ಮೈಸೂರು ಜಿಲ್ಲಾ ಅಧ್ಯಕ್ಷೆ ಮಾಲವಿಕಾ,ಕಾರ್ಯದರ್ಶಿ ವಿಜಯ ಶಾಸ್ತ್ರಿ ,ಮಾಧ್ಯಮ ಸಂಚಾಲಕ ವಿದ್ಯಾರಣ್ಯ ಇದ್ದರು.
ಕಾನೂನು ಪದವೀಧರರಾಗಿರುವ ಧರ್ಮಶ್ರೀ ಅವರು ಯಶಸ್ವಿ ಉದ್ಯಮಿ. ಫೋಯಲ್ ಆನ್ ವೀಲ್, ಸಂಗ್ರಾಮ್ ಸರ್ವಿಸಸ್ ಸಂಸ್ಥೆಗಳನ್ನು ಹೊಂದಿದ್ದಾರೆ. ರಿಲಯನ್ಸ್ ಗ್ರೂಪ್ನಿಂದ ಯುವ ಉದ್ಯಮಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಲಯನ್ಸ್ ಕ್ಲಬ್ ಮೂಲಕ ಸರ್ಕಾರಿ ಶಾಲೆಗಳಲ್ಲಿ ಹಲವಾರು ಸೇವಾ ಚಟುವಟಿಕೆಗಳನ್ನು ಕೈಗೊಂಡಿದ್ದಾರೆ. ಜತೆಗೆ ರಾಜೀವ್ ನಗರದ ನಿವಾಸಿಗಳಿಗೆ ಉಚಿತ ಕಾನೂನು ನೆರವು ನೀಡುತ್ತಿದ್ದಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…