ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಮೊಮ್ಮಗಳು, ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಅವರ ಪುತ್ರಿ ಯುವ ಉದ್ಯಮಿ ಧರ್ಮಶ್ರೀ ಅವರು ಮೈಸೂರಿನಲ್ಲಿ ಸೋಮವಾರ ಆಮ್ ಆದ್ಮಿ ಪಾರ್ಟಿ ಸೇರ್ಪಡೆಯಾದರು. ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಧರ್ಮಶ್ರೀ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ಮಾತನಾಡಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಧರ್ಮಶ್ರೀ, ರಾಜ್ಯದಲ್ಲಿ ಅಭಿವೃದ್ಧಿ ಆಧಾರಿತ ರಾಜಕಾರಣ ಬೆಳೆಯಬೇಕಿದೆ. ಜಾತಿ, ಧರ್ಮಾಧಾರಿತ ರಾಜಕಾರಣಿ ಸಾಕಾಗಿದೆ. ದೆಹಲಿ ಮಾದರಿಯಲ್ಲಿ ರಾಜ್ಯವನ್ನೂ ಅಭಿವೃದ್ಧಿ ಮಾಡಲು ಸಾಧ್ಯವಿದೆ ಎಂದರು.
ಈ ಸಂದರ್ಭ ಎಎಪಿ ಮೈಸೂರು ಜಿಲ್ಲಾ ಅಧ್ಯಕ್ಷೆ ಮಾಲವಿಕಾ,ಕಾರ್ಯದರ್ಶಿ ವಿಜಯ ಶಾಸ್ತ್ರಿ ,ಮಾಧ್ಯಮ ಸಂಚಾಲಕ ವಿದ್ಯಾರಣ್ಯ ಇದ್ದರು.
ಕಾನೂನು ಪದವೀಧರರಾಗಿರುವ ಧರ್ಮಶ್ರೀ ಅವರು ಯಶಸ್ವಿ ಉದ್ಯಮಿ. ಫೋಯಲ್ ಆನ್ ವೀಲ್, ಸಂಗ್ರಾಮ್ ಸರ್ವಿಸಸ್ ಸಂಸ್ಥೆಗಳನ್ನು ಹೊಂದಿದ್ದಾರೆ. ರಿಲಯನ್ಸ್ ಗ್ರೂಪ್ನಿಂದ ಯುವ ಉದ್ಯಮಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಲಯನ್ಸ್ ಕ್ಲಬ್ ಮೂಲಕ ಸರ್ಕಾರಿ ಶಾಲೆಗಳಲ್ಲಿ ಹಲವಾರು ಸೇವಾ ಚಟುವಟಿಕೆಗಳನ್ನು ಕೈಗೊಂಡಿದ್ದಾರೆ. ಜತೆಗೆ ರಾಜೀವ್ ನಗರದ ನಿವಾಸಿಗಳಿಗೆ ಉಚಿತ ಕಾನೂನು ನೆರವು ನೀಡುತ್ತಿದ್ದಾರೆ.
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…