ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಮೊಮ್ಮಗಳು, ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಅವರ ಪುತ್ರಿ ಯುವ ಉದ್ಯಮಿ ಧರ್ಮಶ್ರೀ ಅವರು ಮೈಸೂರಿನಲ್ಲಿ ಸೋಮವಾರ ಆಮ್ ಆದ್ಮಿ ಪಾರ್ಟಿ ಸೇರ್ಪಡೆಯಾದರು. ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಧರ್ಮಶ್ರೀ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ಮಾತನಾಡಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಧರ್ಮಶ್ರೀ, ರಾಜ್ಯದಲ್ಲಿ ಅಭಿವೃದ್ಧಿ ಆಧಾರಿತ ರಾಜಕಾರಣ ಬೆಳೆಯಬೇಕಿದೆ. ಜಾತಿ, ಧರ್ಮಾಧಾರಿತ ರಾಜಕಾರಣಿ ಸಾಕಾಗಿದೆ. ದೆಹಲಿ ಮಾದರಿಯಲ್ಲಿ ರಾಜ್ಯವನ್ನೂ ಅಭಿವೃದ್ಧಿ ಮಾಡಲು ಸಾಧ್ಯವಿದೆ ಎಂದರು.
ಈ ಸಂದರ್ಭ ಎಎಪಿ ಮೈಸೂರು ಜಿಲ್ಲಾ ಅಧ್ಯಕ್ಷೆ ಮಾಲವಿಕಾ,ಕಾರ್ಯದರ್ಶಿ ವಿಜಯ ಶಾಸ್ತ್ರಿ ,ಮಾಧ್ಯಮ ಸಂಚಾಲಕ ವಿದ್ಯಾರಣ್ಯ ಇದ್ದರು.
ಕಾನೂನು ಪದವೀಧರರಾಗಿರುವ ಧರ್ಮಶ್ರೀ ಅವರು ಯಶಸ್ವಿ ಉದ್ಯಮಿ. ಫೋಯಲ್ ಆನ್ ವೀಲ್, ಸಂಗ್ರಾಮ್ ಸರ್ವಿಸಸ್ ಸಂಸ್ಥೆಗಳನ್ನು ಹೊಂದಿದ್ದಾರೆ. ರಿಲಯನ್ಸ್ ಗ್ರೂಪ್ನಿಂದ ಯುವ ಉದ್ಯಮಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಲಯನ್ಸ್ ಕ್ಲಬ್ ಮೂಲಕ ಸರ್ಕಾರಿ ಶಾಲೆಗಳಲ್ಲಿ ಹಲವಾರು ಸೇವಾ ಚಟುವಟಿಕೆಗಳನ್ನು ಕೈಗೊಂಡಿದ್ದಾರೆ. ಜತೆಗೆ ರಾಜೀವ್ ನಗರದ ನಿವಾಸಿಗಳಿಗೆ ಉಚಿತ ಕಾನೂನು ನೆರವು ನೀಡುತ್ತಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…