ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರು ಸುಮ್ಮನೆ ಕೈಕಟ್ಟಿ ಕೂರುವ ಬದಲು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು. ಮುತ್ತು ಕೃಷಿಯನ್ನು ಯಾರು ಬೇಕಾದರೂ ಮಾಡಬಹುದು ಎಂದು ಕೋಟಾ ಗೀತಾನಂದ ಪ್ರತಿಷ್ಠಾನದ ಅಧ್ಯಕ್ಷ ಆನಂದ್ ಕುಂದರ್ ಹೇಳಿದರು.
ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಉಡುಪಿಯ ಕೃಷಿ ವಿಜ್ಞಾನ ಕೇಂದ್ರದ ಬ್ರಹ್ಮಾವರದಲ್ಲಿ “ಮುತ್ತು ಕೃಷಿ ಮಾಹಿತಿ ಕಾರ್ಯಾಗಾರ”ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ರವಿ, ಮುತ್ತು ಕೃಷಿ ಲಾಭದಾಯಕವಾಗಿದ್ದು ಕೃಷಿಕರು ಈ ಮಾದರಿಯ ಕೃಷಿಯನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು ಎಂದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹರೀಶ್, ಬ್ಯಾಂಕಿನಿಂದ ಸಾಲ ಪಡೆದು ಜನರು ಉದ್ಯಮ ಆರಂಭಿಸಬೇಕು. ಇದಕ್ಕೆ ಬ್ಯಾಂಕ್ ಗಳಿಂದ ಸಾಲಸೌಲಭ್ಯ ದೊರೆಯಲಿದೆ ಎಂದು ಹೇಳಿದರು.
ಹಿರಿಯ ವಿಜ್ಞಾನಿ ಧನಂಜಯ್, ಇತರೆ ಕೃಷಿ ಚಟುವಟಿಕೆಗಳೊಂದಿಗೆ ಮುತ್ತು ಕೃಷಿಯನ್ನು ರೈತರು ಮಿಶ್ರ ಕೃಷಿಯಾಗಿ ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು ಎಂದರು.
ಈ ವೇಳೆ ಕೆ.ವಿ.ಕೆ ಮುಖ್ಯಸ್ಥ ಹಿರಿಯ ವಿಜ್ಞಾನಿ ಧನಂಜಯ್, ಮುತ್ತು ಕೃಷಿಕರಾದ ಸುಳ್ಯದ ನವೀನ್ ಚಂದ್ರ, ಬೆಂಗಳೂರಿನ ಪ್ರಜ್ವಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…