ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರು ಸುಮ್ಮನೆ ಕೈಕಟ್ಟಿ ಕೂರುವ ಬದಲು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು. ಮುತ್ತು ಕೃಷಿಯನ್ನು ಯಾರು ಬೇಕಾದರೂ ಮಾಡಬಹುದು ಎಂದು ಕೋಟಾ ಗೀತಾನಂದ ಪ್ರತಿಷ್ಠಾನದ ಅಧ್ಯಕ್ಷ ಆನಂದ್ ಕುಂದರ್ ಹೇಳಿದರು.
ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಉಡುಪಿಯ ಕೃಷಿ ವಿಜ್ಞಾನ ಕೇಂದ್ರದ ಬ್ರಹ್ಮಾವರದಲ್ಲಿ “ಮುತ್ತು ಕೃಷಿ ಮಾಹಿತಿ ಕಾರ್ಯಾಗಾರ”ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ರವಿ, ಮುತ್ತು ಕೃಷಿ ಲಾಭದಾಯಕವಾಗಿದ್ದು ಕೃಷಿಕರು ಈ ಮಾದರಿಯ ಕೃಷಿಯನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು ಎಂದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹರೀಶ್, ಬ್ಯಾಂಕಿನಿಂದ ಸಾಲ ಪಡೆದು ಜನರು ಉದ್ಯಮ ಆರಂಭಿಸಬೇಕು. ಇದಕ್ಕೆ ಬ್ಯಾಂಕ್ ಗಳಿಂದ ಸಾಲಸೌಲಭ್ಯ ದೊರೆಯಲಿದೆ ಎಂದು ಹೇಳಿದರು.
ಹಿರಿಯ ವಿಜ್ಞಾನಿ ಧನಂಜಯ್, ಇತರೆ ಕೃಷಿ ಚಟುವಟಿಕೆಗಳೊಂದಿಗೆ ಮುತ್ತು ಕೃಷಿಯನ್ನು ರೈತರು ಮಿಶ್ರ ಕೃಷಿಯಾಗಿ ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು ಎಂದರು.
ಈ ವೇಳೆ ಕೆ.ವಿ.ಕೆ ಮುಖ್ಯಸ್ಥ ಹಿರಿಯ ವಿಜ್ಞಾನಿ ಧನಂಜಯ್, ಮುತ್ತು ಕೃಷಿಕರಾದ ಸುಳ್ಯದ ನವೀನ್ ಚಂದ್ರ, ಬೆಂಗಳೂರಿನ ಪ್ರಜ್ವಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…