Advertisement
MIRROR FOCUS

ಬ್ರಹ್ಮಾವರದಲ್ಲಿ ಮುತ್ತು ಕೃಷಿ ಮಾಹಿತಿ  ಕಾರ್ಯಾಗಾರ | ಯುವಕರು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಬೇಕು |

Share

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರು ಸುಮ್ಮನೆ ಕೈಕಟ್ಟಿ ಕೂರುವ ಬದಲು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು. ಮುತ್ತು ಕೃಷಿಯನ್ನು ಯಾರು ಬೇಕಾದರೂ ಮಾಡಬಹುದು ಎಂದು ಕೋಟಾ ಗೀತಾನಂದ ಪ್ರತಿಷ್ಠಾನದ ಅಧ್ಯಕ್ಷ ಆನಂದ್ ಕುಂದರ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಉಡುಪಿಯ ಕೃಷಿ ವಿಜ್ಞಾನ ಕೇಂದ್ರದ ಬ್ರಹ್ಮಾವರದಲ್ಲಿ “ಮುತ್ತು ಕೃಷಿ ಮಾಹಿತಿ  ಕಾರ್ಯಾಗಾರ”ಕ್ಕೆ  ಚಾಲನೆ ನೀಡಿ ಅವರು ಮಾತನಾಡಿದರು.

ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ರವಿ,  ಮುತ್ತು ಕೃಷಿ ಲಾಭದಾಯಕವಾಗಿದ್ದು ಕೃಷಿಕರು ಈ ಮಾದರಿಯ ಕೃಷಿಯನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು ಎಂದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹರೀಶ್, ಬ್ಯಾಂಕಿನಿಂದ ಸಾಲ ಪಡೆದು ಜನರು ಉದ್ಯಮ ಆರಂಭಿಸಬೇಕು. ಇದಕ್ಕೆ ಬ್ಯಾಂಕ್ ಗಳಿಂದ ಸಾಲಸೌಲಭ್ಯ ದೊರೆಯಲಿದೆ ಎಂದು ಹೇಳಿದರು.

ಹಿರಿಯ ವಿಜ್ಞಾನಿ ಧನಂಜಯ್, ಇತರೆ ಕೃಷಿ ಚಟುವಟಿಕೆಗಳೊಂದಿಗೆ ಮುತ್ತು ಕೃಷಿಯನ್ನು ರೈತರು ಮಿಶ್ರ ಕೃಷಿಯಾಗಿ ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು ಎಂದರು.

ಈ ವೇಳೆ  ಕೆ.ವಿ.ಕೆ ಮುಖ್ಯಸ್ಥ ಹಿರಿಯ ವಿಜ್ಞಾನಿ ಧನಂಜಯ್, ಮುತ್ತು ಕೃಷಿಕರಾದ ಸುಳ್ಯದ ನವೀನ್ ಚಂದ್ರ, ಬೆಂಗಳೂರಿನ ಪ್ರಜ್ವಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

2 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

7 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

7 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago