ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರು ಸುಮ್ಮನೆ ಕೈಕಟ್ಟಿ ಕೂರುವ ಬದಲು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು. ಮುತ್ತು ಕೃಷಿಯನ್ನು ಯಾರು ಬೇಕಾದರೂ ಮಾಡಬಹುದು ಎಂದು ಕೋಟಾ ಗೀತಾನಂದ ಪ್ರತಿಷ್ಠಾನದ ಅಧ್ಯಕ್ಷ ಆನಂದ್ ಕುಂದರ್ ಹೇಳಿದರು.
ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಉಡುಪಿಯ ಕೃಷಿ ವಿಜ್ಞಾನ ಕೇಂದ್ರದ ಬ್ರಹ್ಮಾವರದಲ್ಲಿ “ಮುತ್ತು ಕೃಷಿ ಮಾಹಿತಿ ಕಾರ್ಯಾಗಾರ”ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ರವಿ, ಮುತ್ತು ಕೃಷಿ ಲಾಭದಾಯಕವಾಗಿದ್ದು ಕೃಷಿಕರು ಈ ಮಾದರಿಯ ಕೃಷಿಯನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು ಎಂದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹರೀಶ್, ಬ್ಯಾಂಕಿನಿಂದ ಸಾಲ ಪಡೆದು ಜನರು ಉದ್ಯಮ ಆರಂಭಿಸಬೇಕು. ಇದಕ್ಕೆ ಬ್ಯಾಂಕ್ ಗಳಿಂದ ಸಾಲಸೌಲಭ್ಯ ದೊರೆಯಲಿದೆ ಎಂದು ಹೇಳಿದರು.
ಹಿರಿಯ ವಿಜ್ಞಾನಿ ಧನಂಜಯ್, ಇತರೆ ಕೃಷಿ ಚಟುವಟಿಕೆಗಳೊಂದಿಗೆ ಮುತ್ತು ಕೃಷಿಯನ್ನು ರೈತರು ಮಿಶ್ರ ಕೃಷಿಯಾಗಿ ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು ಎಂದರು.
ಈ ವೇಳೆ ಕೆ.ವಿ.ಕೆ ಮುಖ್ಯಸ್ಥ ಹಿರಿಯ ವಿಜ್ಞಾನಿ ಧನಂಜಯ್, ಮುತ್ತು ಕೃಷಿಕರಾದ ಸುಳ್ಯದ ನವೀನ್ ಚಂದ್ರ, ಬೆಂಗಳೂರಿನ ಪ್ರಜ್ವಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…