ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರು ಸುಮ್ಮನೆ ಕೈಕಟ್ಟಿ ಕೂರುವ ಬದಲು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು. ಮುತ್ತು ಕೃಷಿಯನ್ನು ಯಾರು ಬೇಕಾದರೂ ಮಾಡಬಹುದು ಎಂದು ಕೋಟಾ ಗೀತಾನಂದ ಪ್ರತಿಷ್ಠಾನದ ಅಧ್ಯಕ್ಷ ಆನಂದ್ ಕುಂದರ್ ಹೇಳಿದರು.
ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಉಡುಪಿಯ ಕೃಷಿ ವಿಜ್ಞಾನ ಕೇಂದ್ರದ ಬ್ರಹ್ಮಾವರದಲ್ಲಿ “ಮುತ್ತು ಕೃಷಿ ಮಾಹಿತಿ ಕಾರ್ಯಾಗಾರ”ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ರವಿ, ಮುತ್ತು ಕೃಷಿ ಲಾಭದಾಯಕವಾಗಿದ್ದು ಕೃಷಿಕರು ಈ ಮಾದರಿಯ ಕೃಷಿಯನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು ಎಂದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹರೀಶ್, ಬ್ಯಾಂಕಿನಿಂದ ಸಾಲ ಪಡೆದು ಜನರು ಉದ್ಯಮ ಆರಂಭಿಸಬೇಕು. ಇದಕ್ಕೆ ಬ್ಯಾಂಕ್ ಗಳಿಂದ ಸಾಲಸೌಲಭ್ಯ ದೊರೆಯಲಿದೆ ಎಂದು ಹೇಳಿದರು.
ಹಿರಿಯ ವಿಜ್ಞಾನಿ ಧನಂಜಯ್, ಇತರೆ ಕೃಷಿ ಚಟುವಟಿಕೆಗಳೊಂದಿಗೆ ಮುತ್ತು ಕೃಷಿಯನ್ನು ರೈತರು ಮಿಶ್ರ ಕೃಷಿಯಾಗಿ ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು ಎಂದರು.
ಈ ವೇಳೆ ಕೆ.ವಿ.ಕೆ ಮುಖ್ಯಸ್ಥ ಹಿರಿಯ ವಿಜ್ಞಾನಿ ಧನಂಜಯ್, ಮುತ್ತು ಕೃಷಿಕರಾದ ಸುಳ್ಯದ ನವೀನ್ ಚಂದ್ರ, ಬೆಂಗಳೂರಿನ ಪ್ರಜ್ವಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…