Advertisement
Exclusive - Mirror Hunt

ಅಡಿಕೆ ಮರದ ಸೋಫಾ ಸೆಟ್‌ | ಹಳ್ಳಿ ಸೊಗಡಿನ ಮನೆಗೆ ಅಂದದ ದೇಸಿ ಲುಕ್‌ | ಅಡಿಕೆ ಮೌಲ್ಯವರ್ಧನೆಗೆ ಇನ್ನೊಂದು ದಾರಿ | ಸುಳ್ಯದ ಯುವಕನ ಹೊಸ ಐಡಿಯಾ |

Share

ಅಡಿಕೆ… ಕರಾವಳಿ ಹಾಗೂ ಮಲೆನಾಡಿನ ಕೃಷಿಕರ ಜೀವನಾಡಿ. ಆದರೆ ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಒಳ್ಳೆಯ ದರ ಇದ್ದರೂ ರೋಗಬಾಧೆ, ಪ್ರಾಕೃತಿಕ ವಿಕೋಪ, ಇತರೆ ಸವಾಲುಗಳನ್ನು ಎದುರಿಸಿ ರೈತರು ಬೆಳೆ ಬೆಳೆಯುತ್ತಿದ್ದಾರೆ. ಹಾಗಾಗಿ ಕೇವಲ ಅಡಿಕೆಗೆ ಮಾತ್ರ ನೆಚ್ಚಿಕೊಳ್ಳದೆ, ಅಡಿಕೆಗಳಿಂದ ಆಗುವ ಉಪಉತ್ಪನ್ನಗಳತ್ತ ಮನಸ್ಸು ಮಾಡುತ್ತಿದ್ದಾರೆ. ಅಡಿಕೆ ಚೊಗರಿನ ಬಣ್ಣ, ವಿವಿಧ ತಿನಿಸುಗಳು, ಅಡಿಕೆ ಟೀ, ಹಾಳೆ ತಟ್ಟೆ, ಅಡಿಕೆ ಸಿಪ್ಪೆಯಿಂದ ಬಟ್ಟೆ ತಯಾರಿ ಹೀಗೆ ಒಂದಲ್ಲ ಒಂದು ರೀತಿಯಲ್ಲಿ ಹೊಸತನ್ನು ಕಂಡು ಹಿಡಿದು ಅಡಿಕೆಗೆ ಮೌಲ್ಯವರ್ಧನೆ ಮಾಡುವತ್ತ ಕೃಷಿಕರು ಮನಸ್ಸು ಮಾಡುತ್ತಿದ್ದಾರೆ.ಇದೀಗ ಅಡಿಕೆ ಮರ ಸೋಫಾ ಇನ್ನೊಂದು ಸೇರ್ಪಡೆಯಾಗಿದೆ.

ಕರಾವಳಿ, ಮಲೆನಾಡಿನಲ್ಲಿ ಇತ್ತೀಚೆಗೆ ಹಳದಿ ರೋಗ, ಎಲೆ ಚುಕ್ಕಿ ರೋಗ  ಕೃಷಿಕರನ್ನು ಕಾಡುತ್ತಿದೆ. ಅದೆಷ್ಟೋ ಮಂದಿ ಮರಗಳನ್ನು ಕಡಿದ್ದು ದಲ್ಲಾಳಿಗಳಿಗೆ ಮಾರಿದ್ದೇ ಹೆಚ್ಚು..!, ಇನ್ನೂ ಕೆಲವರ ಮನೆಯ ಸ್ನಾನದ ಒಲೆ ಸೇರುವುದಕ್ಕೆ ಆದ್ಯತೆ..!. ಆದರೆ, ಅಡಿಕೆ ಮರಗಳನ್ನು ರೀಪು ಮಾಡಿ ಕೊಟ್ಟಿಗೆಗಳಿಗೆ, ಸಣ್ಣ ಸಣ್ಣ ಶೆಡ್‌ ಕಟ್ಟಲು ಉಪಯೋಗಿಸಲಾಗುತ್ತಿತ್ತು. ಅದರೊಂದಿಗೆ ತೆಂಗಿನ ಮರಗಳ ದಿಮ್ಮಿಗಳನ್ನು ಮನೆ , ಕೊಟ್ಟಿಗೆ ಕಟ್ಟಲು ಬಳಸುತ್ತಿದ್ದದ್ದು ಎಲ್ಲರಿಗೂ ತಿಳಿದೇ ಇದೆ. ಇಲ್ಲೊಬ್ಬ ಯುವಕ ಅದೇ ಮಾದರಿಯ ಕೆಲಸಕ್ಕೆ ಇಳಿದಿದ್ದಾರೆ. ಅಡಿಕೆ ಮರ ಹಾಗೂ ತೆಂಗಿನ ಮರದ ತುಂಡುಗಳನ್ನು ಬಳಸಿ ಪೀಠೋಪಕರಣ ಮಾಡಿ ಗಮನ ಸೆಳೆದಿದ್ದಾರೆ.

ಈ ಬಗ್ಗೆ ಹೆಚ್ಚಿನ ಅಡಿಕೆ ಕೃಷಿಕರಿಗೆ ಇಂತಹದ್ದೊಂದು ಉಪಾಯ ಹೊಳೆದಿದ್ದರೂ ಕೆಲಸಕ್ಕೆ ಇಳಿದಿಲ್ಲ. ಸುಳ್ಯ ತಾಲೂಕಿನ ಅರಂಬೂರಿನ ಕೃಷಿಕ ಕೃಷ್ಣ ಕಿರಣ್‌ ಭಾರಧ್ವಜ್ ಅವರಿಗೆ ಈ ಬಗ್ಗೆ ಉಪಾಯ ಹೊಳೆದಿದೆ, ಕಾರ್ಯರೂಪಕ್ಕೆ ಇಳಿದಿದ್ದಾರೆ. ಹಳದಿ ರೋಗ ಬಂದು ತೋಟದ ಅಡಿಕೆ ಮರಗಳನ್ನು ಕಡಿಯುವ ಸನ್ನಿವೇಶ ಬಂದಾಗ ಇವರಿಗೆ ಹೊಳೆದದ್ದು ಈ ಮರಗಳಿಂದ ನಾವು ಪೀಠೋಪಕರಣ ಯಾಕೆ ಮಾಡಬಾರದು ಎಂದು. ಹಾಗೆ ಊರ ತಳಿಯ 25-30 ವರ್ಷ ಹಳೆಯ ಅಡಿಕೆ ಮರದ ಬುಡದ ತುಂಡುಗಳನ್ನು ಆಯ್ಕೆ ಮಾಡಿ, ಅದನ್ನು ತುಂಡು ಮಾಡಿ, ಅದರ ಒಳ ತಿರುಳನ್ನು ತೆಗೆದು ಅದರಿಂದ ಪೀಠೋಪಕರಣ ಮಾಡುವ ಐಡಿಯಾ ಮಾಡಿದರು.

ಅಡಿಕೆ ಮರ ಗಟ್ಟಿ ಅನ್ನೋದು ಗೊತ್ತು. ಆದರೆ ಇದು ಗೆದ್ದಲು ಹಿಡಿದರೆ ಏನು ಮಾಡುವುದು ಅನ್ನೋ ಯೋಚನೆ ಬಂದಾಗ ಹಿರಿಯರು ಉಪಯೋಗಿಸುತ್ತತಿದ್ದ ಕ್ರಮವನ್ನು ಮಾಡಿದರು. ಅದನ್ನು 15 ರಿಂದ 20 ದಿನಗಳ ಕಾಲ ಉಪ್ಪು ನೀರಿನಲ್ಲಿ ಹಾಕಿ, ಮತ್ತೆ ಒಂದು ವಾರ ಸಾದಾ ನೀರಿನಲ್ಲಿ ಹಾಕಿ ಒಣಗಿಸಿದರು. ಈಗ ಮರ ಗಟ್ಟಿ ಮುಟ್ಟಾಯಿತು.

ನಂತರ ಇದರ ಕೆಲಸ ಮಾಡಲು ಮರದ ಕೆಲಸ ಮಾಡುವವರ ಹುಡುಕುವ ಸರದಿ. ಅವರ ಮಾಮೂಲು ಬಡಗಿಯವರನ್ನು ಸಂಪರ್ಕಿಸಿದಾಗ ಅಡಿಕೆ ಹಾಗೂ ತೆಂಗು ಮರ ಬಹಳ ಗಟ್ಟಿ, ಇದನ್ನು ಪಾಲಿಶ್‌ ಮಾಡುವುದು ಹಾಕುವುದು ಕಷ್ಟ. ಹಾಗೆ ಮರದ ಮಿಲ್‌ ಗೆ ತೆಗೆದುಕೊಂಡು ಹೋದರೆ ಇದರ ಕೆಲಸ ಮಾಡಿದ್ರೆ ನಮ್ಮ ಬ್ಲೇಡ್‌ ಸಮಸ್ಯೆಯಾದೀತು ಎಂಬ ಉತ್ತರ ಬಂತು. ಹಾಗಾಗಿ ತಾವೇ ಒಂದು ಯಂತ್ರ ಖರೀದಿಸಿ ಕೆಲಸ ಆರಂಭವಾಯ್ತು. ಉಳಿದ ಮರಗಳ ಸೋಫಾ ಸೆಟ್‌ ಗಿಂತ ಅರ್ಧಕ್ಕರ್ಧ ಕಡಿಮೆ ಖರ್ಚಿನಲ್ಲಿ ಸೋಫಾ ತಯಾರಾಯ್ತು. ಸೋಫಾದ ಕಾಲು, ಫ್ರೇಮ್‌ ಗಳನ್ನು ತೆಂಗಿನ ಮರದ ತುಂಡುಗಳಿಂದ ಮಾಡಿದ್ರೆ, ಉಳಿದ ರೀಪುಗಳನ್ನು ಅಡಿಕೆ ಮರದಿಂದ ಮಾಡಲಾಯಿತು. ಲೇಬರ್‌ ಕೆಲಸ ಆರಂಭವಾದ ಕಾರಣ ಕೊಂಚ ಜಾಸ್ತಿ ಆದ್ರು ಇದು ಓಕೆ ಅನ್ನಿಸ್ತು ಅವರಿಗೆ. ಉಳಿದ ಮರಗಳ ಸೋಫಾ ಸೆಟ್ಟಿಗೆ ಹೋಲಿಸಿದ್ರೆ ಬಹಳ ಖರ್ಚು ಕಡಿಮೆ. ಹಾಗೆ ನಿಮ್ಮ ಮನೆಗೆ ಚಂದದ ದೇಸಿ ಲುಕ್‌ ನೀಡುತ್ತದೆ.

ಮುಂದಿನ ದಿನಗಳಲ್ಲಿ ಇದನ್ನೇ ಉದ್ಯಮವಾಗಿಸುವ ಆಲೋಚನೆಯನ್ನು ಕಿರಣ್‌ ಕುಮಾರ್‌ ಹೊಂದಿದ್ದಾರೆ. ಸದ್ಯಕ್ಕೆ ಇನ್ನಷ್ಟು ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದಾರೆ. ಈಗಾಗಲೇ ಬಹಳ ಜನ ಈಗಾಗಲೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೇವಲ ಸೋಫಾ ಸೆಟ್‌ ಮಾತ್ರವಲ್ಲ ವಾಲ್‌ ಪಾರ್ಟಿಷನರ್‌ ಕೂಡ ಮಾಡಿದ್ದಾರೆ. ಮುಂದೆ ಟಿಫಾಯ, ಮಂಚ, ದಿವಾನ್‌, ಡೈನಿಂಗ್‌ ಟೇಬಲ್‌ ಎಲ್ಲವೂ ಮಾಡುವ ಆಲೋಚನೆಯಿದೆ ಎನ್ನುತ್ತಾರೆ ಕಿರಣ್‌ ಭಾರಧ್ವಾಜ್.

 

ಇನ್ನು ಮುಂದೆ, ಅಡಿಕೆ ಕೃಷಿಕರ ಮನೆಯ ಪೀಠೋಪಕರಣಗಳು ಅಡಿಕೆ ಮರದಿಂದಲೇ ಆಗಲಿ, ರಾಜ್ಯಕ್ಕೂ ಬಳಕೆಯಾಗುವುದರ ಜೊತೆಗೆ ಅಡಿಕೆಯ ಹೊಸ ಉತ್ಪನ್ನಗಳೂ ತಯಾರಾಗಲಿ.  ಈ ಮೂಲಕ ಪರಿಸರ ಸ್ನೇಹಿ ಬದುಕು ಆರಂಭವಾಗಲಿ.

Young man from Sullia made a sofa using Arecanut wood. Arecanut is now being used towards alternative uses.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಚಿತ್ರಕಲಾ ಪಟ್ರಮೆ

ಪತ್ರಕರ್ತರು, ಹವ್ಯಾಸಿ ಬರಹಗಾರರು

Published by
ಚಿತ್ರಕಲಾ ಪಟ್ರಮೆ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

11 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

13 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

18 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

2 days ago