Advertisement
MIRROR FOCUS

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

Share

ಹಳ್ಳಿ ಎಂದರೆ ಈಗ ವಿದ್ಯಾವಂತರು ಬಯಸುವ ಊರು. ಕೃಷಿ ಎಂದರೆ ಯುವಕರು ಬಯಸುವ ಕ್ಷೇತ್ರವಾಗಿ ಬದಲಾಗುತ್ತಿದೆ. ಇದಕ್ಕೊಬ್ಬ ಉದಾಹರಣೆ ಚಾಮರಾಜನಗರ ಜಿಲ್ಲೆಯ ವಿ.ಸಿ ಹೊಸೂರು ಗ್ರಾಮದ ಯುವಕ ಯೋಗೇಶ್.‌ ವಿದೇಶದಿಂದ ಹಿಂದಿರುಗಿ ತನ್ನೂರಲ್ಲಿ ಕೃಷಿಯಲ್ಲಿ ಅಭೂತಪೂರ್ವ ಸಾಧನೆ ಮಾಡುವ ಮೂಲಕ ಮಾದರಿಯಾಗಿದ್ದಾರೆ.

Advertisement

ವಿದ್ಯಾಭ್ಯಾಸ ಮುಗಿಸಿ ವಿದೇಶಕ್ಕೆ ತೆರಳಿ  ಸಂಬಳ ಪಡೆಯುತ್ತಿದ್ದ   ಚಾಮರಾಜನಗರ ಜಿಲ್ಲೆಯ ಯೋಗೇಶ್  ಮರಳಿ  ತಾಯ್ನಾಡಿಗೆ  ಆಗಮಿಸಿ, ಹಿರಿಯರು ಅನುಸರಿಸಿದ್ದ ಕೃಷಿಯನ್ನೇ ತಮ್ಮ ಮೂಲ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಆರ್ಥಿಕವಾಗಿ ಪ್ರಗತಿ ಸಾಧಿಸುವ ಮೂಲಕ  ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಯೋಗೇಶ್ ತಮ್ಮ ಜಮೀನಿನಲ್ಲಿ ವಿವಿಧ ಬಗೆಯ ಹಣ್ಣು-ತರಕಾರಿ,  ಬಾಳೆ, ಮಾವು, ನಿಂಬೆ, ಪಪ್ಪಾಯ, ಸೀತಾಫಲ, ಸೀಬೆ, ವಿಶೇಷವಾಗಿ ಸೇಬು, ಡ್ಯಾಗನ್ ಫ್ರೂಟ್ಸ್ ಸೇರಿದಂತೆ ತರಾವರಿ ಹಣ್ಣುಗಳನ್ನು ಬೆಳೆದಿದ್ದಾರೆ. ಇದರೊಂದಿಗೆ ವಿವಿಧ ತರಕಾರಿ ಹಾಗೂ ಸೊಪ್ಪಿನ ಜೊತೆಗೆ  ಜೇನುಕೃಷಿಯಲ್ಲೂ ತೊಡಗಿಸಿಕೊಂಡಿದ್ದಾರೆ. ಸಾವಯವ ಮತ್ತು ನೈಸರ್ಗಿಕ ಬೇಸಾಯದ ಮಾದರಿ ಅಳವಡಿಸಿಕೊಂಡಿದ್ದು ರಾಸಾಯನಿಕ ಮುಕ್ತ ಗೊಬ್ಬರವನ್ನು ತಮ್ಮ ಕೃಷಿ ಪದ್ಧತಿಯಲ್ಲಿ ಬಳಕೆ ಮಾಡುತ್ತಿದ್ದು. ತೋಟದಲ್ಲೆ ನೈಸರ್ಗಿಕವಾಗಿ ದೊರಕುವ ಉತ್ಪನ್ನಗಳನ್ನು ಬಳಸಿಕೊಂಡು ಜೀವಾಮೃತ, ಪಂಚಗವ್ಯ, ಎರೆಹುಳು ಗೊಬ್ಬರ ಸೇರಿದಂತೆ ವಿವಿಧ ಮಾದರಿಯ ಸಾವಯವ ಗೊಬ್ಬರ ತಯಾರಿಸಿ ಕೃಷಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ.  ಇದರ ಜೊತೆಗೆ  ಹೈನುಗಾರಿಕೆಯಲ್ಲಿಯೂ  ನಿರತರಾಗಿದ್ದಾರೆ. ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ. ಈ ಮೂಲಕ ಯುವ ಸಮುದಾಯಕ್ಕೂ  ಮಾದರಿಯಾಗಿದ್ದಾರೆ.

ಊರಿನ ಸೆಳೆತದಿಂದ ತಮ್ಮೂರಿಗೆ ಹಿಂತಿರುಗಿ ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದೇನೆ. ಜಮೀನಿನಲ್ಲಿ ವಿದೇಶಿ ತಳಿಯ ಹಣ್ಣುಗಳು, ಔಷಧ ಸಸ್ಯಗಳನ್ನು ಬೆಳೆಯುವ  ಜೊತೆಗೆ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲಾಗಿದೆ.  ಮಾರುಕಟ್ಟೆಯ ಮೌಲ್ಯವರ್ಧನೆ  ಅರಿತು ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದೇನೆ ಎನ್ನುತ್ತಾರೆ ಯುವ ರೈತ ಯೋಗೇಶ್.

ಎರೆಜಲ ಹಾಗೂ ಎರೆಹುಳುವಿನ ಗೊಬ್ಬರ ತಯಾರಿ, ಸುಸ್ಥಿರ ಬೇಸಾಯ ಪದ್ಧತಿ ಅಳವಡಿಕೆ ಮಾಡಿಕೊಂಡಿರುವುದರಿಂದ  ಬಾಳೆ ಉತ್ತಮ ಫಸಲು ನೀಡಿದೆ ಎನ್ನುತ್ತಾರೆ  ರೈತ ಗೂಳಿಪುರ ಬಿ.ನಂದೀಶ್.

ಯೋಗೇಶ್ ಅವರ ತೋಟದಲ್ಲಿ ಸುಸ್ಥಿರ ಬೇಸಾಯ  ಪದ್ಧತಿ ಅಳವಡಿಸಿಕೊಂಡಿದ್ದಾರೆ. ಜೊತೆಗೆ ಭೂಮಿಯ ಫಲವತ್ತತೆ ಕಾಪಾಡಲು ಹಲವು  ಕ್ರಮಗಳನ್ನು ಅನುಸರಿಸಿದ್ದಾರೆ ಎಂದು ಹೇಳುತ್ತಾರೆ ಕೃಷಿ ವಿಜ್ಞಾನ ಕೇಂದ್ರದ ವಿದ್ಯಾರ್ಥಿ ಡಿ.ಜೆ.ರಕ್ಷಿತಾ ಹೇಳಿದರೆ, ರೈತ ಯೋಗೇಶ್ ಅವರ ಸಾವಯವ ಕೃಷಿಯಲ್ಲಿನ  ಸಾಧನೆ  ರೈತ ವಿದ್ಯಾರ್ಥಿಗಳಿಗೆ  ಮಾದರಿಯಾಗಿದೆ ಎಂದು ಹೇಳುತ್ತಾರೆ ವಿದ್ಯಾರ್ಥಿ ಅಂಕಿತ್.

ರೈತ ಯೋಗೇಶ್  ವಿಜ್ಞಾನಿಗಳ ಸಲಹೆ ಪಡೆದು ಸಾಂಪ್ರದಾಯಿಕ ಸುಸ್ಥಿರ ಸಮಗ್ರ ಬೇಸಾಯ ಪದ್ಧತಿ  ಅಳವಡಿಸಿಕೊಂಡಿದ್ದಾರೆ.  ಯೋಗೇಶ್ ಅವರಿಂದ  ಎರೆಜಲ, ಪಂಚಗವ್ಯವನ್ನು ವಿಶ್ವವಿದ್ಯಾಲಯವು ಖರೀದಿಸಿ ಇತರೆ ರೈತರಿಗೆ ಪೂರೈಕೆ  ಮಾಡುತ್ತಿದ್ದೇವೆ ಎಂದು  ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಯೋಗೇಶ್ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

31 minutes ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

15 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

15 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

16 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

16 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

16 hours ago