ಹಳ್ಳಿ ಎಂದರೆ ಈಗ ವಿದ್ಯಾವಂತರು ಬಯಸುವ ಊರು. ಕೃಷಿ ಎಂದರೆ ಯುವಕರು ಬಯಸುವ ಕ್ಷೇತ್ರವಾಗಿ ಬದಲಾಗುತ್ತಿದೆ. ಇದಕ್ಕೊಬ್ಬ ಉದಾಹರಣೆ ಚಾಮರಾಜನಗರ ಜಿಲ್ಲೆಯ ವಿ.ಸಿ ಹೊಸೂರು ಗ್ರಾಮದ ಯುವಕ ಯೋಗೇಶ್. ವಿದೇಶದಿಂದ ಹಿಂದಿರುಗಿ ತನ್ನೂರಲ್ಲಿ ಕೃಷಿಯಲ್ಲಿ ಅಭೂತಪೂರ್ವ ಸಾಧನೆ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ವಿದ್ಯಾಭ್ಯಾಸ ಮುಗಿಸಿ ವಿದೇಶಕ್ಕೆ ತೆರಳಿ ಸಂಬಳ ಪಡೆಯುತ್ತಿದ್ದ ಚಾಮರಾಜನಗರ ಜಿಲ್ಲೆಯ ಯೋಗೇಶ್ ಮರಳಿ ತಾಯ್ನಾಡಿಗೆ ಆಗಮಿಸಿ, ಹಿರಿಯರು ಅನುಸರಿಸಿದ್ದ ಕೃಷಿಯನ್ನೇ ತಮ್ಮ ಮೂಲ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಆರ್ಥಿಕವಾಗಿ ಪ್ರಗತಿ ಸಾಧಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಯೋಗೇಶ್ ತಮ್ಮ ಜಮೀನಿನಲ್ಲಿ ವಿವಿಧ ಬಗೆಯ ಹಣ್ಣು-ತರಕಾರಿ, ಬಾಳೆ, ಮಾವು, ನಿಂಬೆ, ಪಪ್ಪಾಯ, ಸೀತಾಫಲ, ಸೀಬೆ, ವಿಶೇಷವಾಗಿ ಸೇಬು, ಡ್ಯಾಗನ್ ಫ್ರೂಟ್ಸ್ ಸೇರಿದಂತೆ ತರಾವರಿ ಹಣ್ಣುಗಳನ್ನು ಬೆಳೆದಿದ್ದಾರೆ. ಇದರೊಂದಿಗೆ ವಿವಿಧ ತರಕಾರಿ ಹಾಗೂ ಸೊಪ್ಪಿನ ಜೊತೆಗೆ ಜೇನುಕೃಷಿಯಲ್ಲೂ ತೊಡಗಿಸಿಕೊಂಡಿದ್ದಾರೆ. ಸಾವಯವ ಮತ್ತು ನೈಸರ್ಗಿಕ ಬೇಸಾಯದ ಮಾದರಿ ಅಳವಡಿಸಿಕೊಂಡಿದ್ದು ರಾಸಾಯನಿಕ ಮುಕ್ತ ಗೊಬ್ಬರವನ್ನು ತಮ್ಮ ಕೃಷಿ ಪದ್ಧತಿಯಲ್ಲಿ ಬಳಕೆ ಮಾಡುತ್ತಿದ್ದು. ತೋಟದಲ್ಲೆ ನೈಸರ್ಗಿಕವಾಗಿ ದೊರಕುವ ಉತ್ಪನ್ನಗಳನ್ನು ಬಳಸಿಕೊಂಡು ಜೀವಾಮೃತ, ಪಂಚಗವ್ಯ, ಎರೆಹುಳು ಗೊಬ್ಬರ ಸೇರಿದಂತೆ ವಿವಿಧ ಮಾದರಿಯ ಸಾವಯವ ಗೊಬ್ಬರ ತಯಾರಿಸಿ ಕೃಷಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಹೈನುಗಾರಿಕೆಯಲ್ಲಿಯೂ ನಿರತರಾಗಿದ್ದಾರೆ. ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ. ಈ ಮೂಲಕ ಯುವ ಸಮುದಾಯಕ್ಕೂ ಮಾದರಿಯಾಗಿದ್ದಾರೆ.
ಎರೆಜಲ ಹಾಗೂ ಎರೆಹುಳುವಿನ ಗೊಬ್ಬರ ತಯಾರಿ, ಸುಸ್ಥಿರ ಬೇಸಾಯ ಪದ್ಧತಿ ಅಳವಡಿಕೆ ಮಾಡಿಕೊಂಡಿರುವುದರಿಂದ ಬಾಳೆ ಉತ್ತಮ ಫಸಲು ನೀಡಿದೆ ಎನ್ನುತ್ತಾರೆ ರೈತ ಗೂಳಿಪುರ ಬಿ.ನಂದೀಶ್.
ಯೋಗೇಶ್ ಅವರ ತೋಟದಲ್ಲಿ ಸುಸ್ಥಿರ ಬೇಸಾಯ ಪದ್ಧತಿ ಅಳವಡಿಸಿಕೊಂಡಿದ್ದಾರೆ. ಜೊತೆಗೆ ಭೂಮಿಯ ಫಲವತ್ತತೆ ಕಾಪಾಡಲು ಹಲವು ಕ್ರಮಗಳನ್ನು ಅನುಸರಿಸಿದ್ದಾರೆ ಎಂದು ಹೇಳುತ್ತಾರೆ ಕೃಷಿ ವಿಜ್ಞಾನ ಕೇಂದ್ರದ ವಿದ್ಯಾರ್ಥಿ ಡಿ.ಜೆ.ರಕ್ಷಿತಾ ಹೇಳಿದರೆ, ರೈತ ಯೋಗೇಶ್ ಅವರ ಸಾವಯವ ಕೃಷಿಯಲ್ಲಿನ ಸಾಧನೆ ರೈತ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದು ಹೇಳುತ್ತಾರೆ ವಿದ್ಯಾರ್ಥಿ ಅಂಕಿತ್.
ರೈತ ಯೋಗೇಶ್ ವಿಜ್ಞಾನಿಗಳ ಸಲಹೆ ಪಡೆದು ಸಾಂಪ್ರದಾಯಿಕ ಸುಸ್ಥಿರ ಸಮಗ್ರ ಬೇಸಾಯ ಪದ್ಧತಿ ಅಳವಡಿಸಿಕೊಂಡಿದ್ದಾರೆ. ಯೋಗೇಶ್ ಅವರಿಂದ ಎರೆಜಲ, ಪಂಚಗವ್ಯವನ್ನು ವಿಶ್ವವಿದ್ಯಾಲಯವು ಖರೀದಿಸಿ ಇತರೆ ರೈತರಿಗೆ ಪೂರೈಕೆ ಮಾಡುತ್ತಿದ್ದೇವೆ ಎಂದು ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಯೋಗೇಶ್ ಹೇಳುತ್ತಾರೆ.
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…