Advertisement
MIRROR FOCUS

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

Share

ಹಳ್ಳಿ ಎಂದರೆ ಈಗ ವಿದ್ಯಾವಂತರು ಬಯಸುವ ಊರು. ಕೃಷಿ ಎಂದರೆ ಯುವಕರು ಬಯಸುವ ಕ್ಷೇತ್ರವಾಗಿ ಬದಲಾಗುತ್ತಿದೆ. ಇದಕ್ಕೊಬ್ಬ ಉದಾಹರಣೆ ಚಾಮರಾಜನಗರ ಜಿಲ್ಲೆಯ ವಿ.ಸಿ ಹೊಸೂರು ಗ್ರಾಮದ ಯುವಕ ಯೋಗೇಶ್.‌ ವಿದೇಶದಿಂದ ಹಿಂದಿರುಗಿ ತನ್ನೂರಲ್ಲಿ ಕೃಷಿಯಲ್ಲಿ ಅಭೂತಪೂರ್ವ ಸಾಧನೆ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ವಿದ್ಯಾಭ್ಯಾಸ ಮುಗಿಸಿ ವಿದೇಶಕ್ಕೆ ತೆರಳಿ  ಸಂಬಳ ಪಡೆಯುತ್ತಿದ್ದ   ಚಾಮರಾಜನಗರ ಜಿಲ್ಲೆಯ ಯೋಗೇಶ್  ಮರಳಿ  ತಾಯ್ನಾಡಿಗೆ  ಆಗಮಿಸಿ, ಹಿರಿಯರು ಅನುಸರಿಸಿದ್ದ ಕೃಷಿಯನ್ನೇ ತಮ್ಮ ಮೂಲ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಆರ್ಥಿಕವಾಗಿ ಪ್ರಗತಿ ಸಾಧಿಸುವ ಮೂಲಕ  ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಯೋಗೇಶ್ ತಮ್ಮ ಜಮೀನಿನಲ್ಲಿ ವಿವಿಧ ಬಗೆಯ ಹಣ್ಣು-ತರಕಾರಿ,  ಬಾಳೆ, ಮಾವು, ನಿಂಬೆ, ಪಪ್ಪಾಯ, ಸೀತಾಫಲ, ಸೀಬೆ, ವಿಶೇಷವಾಗಿ ಸೇಬು, ಡ್ಯಾಗನ್ ಫ್ರೂಟ್ಸ್ ಸೇರಿದಂತೆ ತರಾವರಿ ಹಣ್ಣುಗಳನ್ನು ಬೆಳೆದಿದ್ದಾರೆ. ಇದರೊಂದಿಗೆ ವಿವಿಧ ತರಕಾರಿ ಹಾಗೂ ಸೊಪ್ಪಿನ ಜೊತೆಗೆ  ಜೇನುಕೃಷಿಯಲ್ಲೂ ತೊಡಗಿಸಿಕೊಂಡಿದ್ದಾರೆ. ಸಾವಯವ ಮತ್ತು ನೈಸರ್ಗಿಕ ಬೇಸಾಯದ ಮಾದರಿ ಅಳವಡಿಸಿಕೊಂಡಿದ್ದು ರಾಸಾಯನಿಕ ಮುಕ್ತ ಗೊಬ್ಬರವನ್ನು ತಮ್ಮ ಕೃಷಿ ಪದ್ಧತಿಯಲ್ಲಿ ಬಳಕೆ ಮಾಡುತ್ತಿದ್ದು. ತೋಟದಲ್ಲೆ ನೈಸರ್ಗಿಕವಾಗಿ ದೊರಕುವ ಉತ್ಪನ್ನಗಳನ್ನು ಬಳಸಿಕೊಂಡು ಜೀವಾಮೃತ, ಪಂಚಗವ್ಯ, ಎರೆಹುಳು ಗೊಬ್ಬರ ಸೇರಿದಂತೆ ವಿವಿಧ ಮಾದರಿಯ ಸಾವಯವ ಗೊಬ್ಬರ ತಯಾರಿಸಿ ಕೃಷಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ.  ಇದರ ಜೊತೆಗೆ  ಹೈನುಗಾರಿಕೆಯಲ್ಲಿಯೂ  ನಿರತರಾಗಿದ್ದಾರೆ. ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ. ಈ ಮೂಲಕ ಯುವ ಸಮುದಾಯಕ್ಕೂ  ಮಾದರಿಯಾಗಿದ್ದಾರೆ.

ಊರಿನ ಸೆಳೆತದಿಂದ ತಮ್ಮೂರಿಗೆ ಹಿಂತಿರುಗಿ ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದೇನೆ. ಜಮೀನಿನಲ್ಲಿ ವಿದೇಶಿ ತಳಿಯ ಹಣ್ಣುಗಳು, ಔಷಧ ಸಸ್ಯಗಳನ್ನು ಬೆಳೆಯುವ  ಜೊತೆಗೆ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲಾಗಿದೆ.  ಮಾರುಕಟ್ಟೆಯ ಮೌಲ್ಯವರ್ಧನೆ  ಅರಿತು ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದೇನೆ ಎನ್ನುತ್ತಾರೆ ಯುವ ರೈತ ಯೋಗೇಶ್.

ಎರೆಜಲ ಹಾಗೂ ಎರೆಹುಳುವಿನ ಗೊಬ್ಬರ ತಯಾರಿ, ಸುಸ್ಥಿರ ಬೇಸಾಯ ಪದ್ಧತಿ ಅಳವಡಿಕೆ ಮಾಡಿಕೊಂಡಿರುವುದರಿಂದ  ಬಾಳೆ ಉತ್ತಮ ಫಸಲು ನೀಡಿದೆ ಎನ್ನುತ್ತಾರೆ  ರೈತ ಗೂಳಿಪುರ ಬಿ.ನಂದೀಶ್.

ಯೋಗೇಶ್ ಅವರ ತೋಟದಲ್ಲಿ ಸುಸ್ಥಿರ ಬೇಸಾಯ  ಪದ್ಧತಿ ಅಳವಡಿಸಿಕೊಂಡಿದ್ದಾರೆ. ಜೊತೆಗೆ ಭೂಮಿಯ ಫಲವತ್ತತೆ ಕಾಪಾಡಲು ಹಲವು  ಕ್ರಮಗಳನ್ನು ಅನುಸರಿಸಿದ್ದಾರೆ ಎಂದು ಹೇಳುತ್ತಾರೆ ಕೃಷಿ ವಿಜ್ಞಾನ ಕೇಂದ್ರದ ವಿದ್ಯಾರ್ಥಿ ಡಿ.ಜೆ.ರಕ್ಷಿತಾ ಹೇಳಿದರೆ, ರೈತ ಯೋಗೇಶ್ ಅವರ ಸಾವಯವ ಕೃಷಿಯಲ್ಲಿನ  ಸಾಧನೆ  ರೈತ ವಿದ್ಯಾರ್ಥಿಗಳಿಗೆ  ಮಾದರಿಯಾಗಿದೆ ಎಂದು ಹೇಳುತ್ತಾರೆ ವಿದ್ಯಾರ್ಥಿ ಅಂಕಿತ್.

ರೈತ ಯೋಗೇಶ್  ವಿಜ್ಞಾನಿಗಳ ಸಲಹೆ ಪಡೆದು ಸಾಂಪ್ರದಾಯಿಕ ಸುಸ್ಥಿರ ಸಮಗ್ರ ಬೇಸಾಯ ಪದ್ಧತಿ  ಅಳವಡಿಸಿಕೊಂಡಿದ್ದಾರೆ.  ಯೋಗೇಶ್ ಅವರಿಂದ  ಎರೆಜಲ, ಪಂಚಗವ್ಯವನ್ನು ವಿಶ್ವವಿದ್ಯಾಲಯವು ಖರೀದಿಸಿ ಇತರೆ ರೈತರಿಗೆ ಪೂರೈಕೆ  ಮಾಡುತ್ತಿದ್ದೇವೆ ಎಂದು  ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಯೋಗೇಶ್ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

3 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

12 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

13 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

13 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

18 hours ago