ಅಪಘಾತದಲ್ಲಿ ಯುವಕನ ಬ್ರೈನ್ ಡೆಡ್ | ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು |

September 27, 2022
9:32 PM

ಬೆಂಗಳೂರು ಗ್ರಾಮಾಂತರ ಗಂಗೊಂಡನ ಹಳ್ಳಿಯ ಯುವಕ ದೀಪಕ್ ಎಂಬವರು ಸೆ.25 ರಂದು ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು.ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೀಪಕ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಅವರ ಮೆದುಳು ನಿಷ್ಕ್ರಿಯಗೊಂಡಿದೆ (Brain dead) ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ  ಆತನ ಅಂಗಾಂಗ ದಾನ ಮಾಡುವ ಮೂಲಕ  ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

26 ವರ್ಷದ ಯುವಕ ದೀಪಕ್  ಚಲಾಯಿಸುತ್ತಿದ್ದ ಕಾರು ನಿಂತಿದ್ದ ಕ್ಯಾಂಟರ್​ ಗೆ ಹಿಂಬದಿಯಿಂದ  ಡಿಕ್ಕಿ ಹೊಡೆದಿತ್ತು. ಈ ದುರಂತದಲ್ಲಿ ದೀಪಕ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಚಿಕಿತ್ಸೆ ಬಳಿಕವೂ ದೀಪಕ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಹಿನ್ನೆಲೆ ಆರ್.ಆರ್. ನಗರದಲ್ಲಿರುವ ಸ್ಪರ್ಷ ಆಸ್ಪತ್ರೆ ವೈದ್ಯರು ಬ್ರೈನ್ ಡೆಡ್ ಎಂದು ಘೋಷಣೆ ಮಾಡಿದ್ದರು. ಮೆದುಳು ನಿಷ್ಕ್ರಿಯ ಹಿನ್ನೆಲೆ ಕುಟುಂಬಸ್ಥರು ಆತನ ಅಂಗಾಂಗಳನ್ನು ದಾನ ಮಾಡಿದ್ದಾರೆ. ಮೃತನ ಕಿಡ್ನಿ, ಕಣ್ಣು,  ಸೇರಿದಂತೆ ಹಲವು ಅಂಗಾಂಗಳನ್ನು ದಾನ ಮಾಡಿದ್ದಾರೆ.

ಯುವಕ ದೀಪಕ್ ಅವರ ದೇಹದಿಂದ ಯಕೃತ್ತು, ಕಿಡ್ನಿ, ಹೃದಯದ ಕವಾಟ, ಕಾರ್ನಿಯಾ ಹಾಗೂ ಚರ್ಮವನ್ನು ಕಸಿ ಮಾಡಲಾಗಿದ್ದು, ಅನೇಕರಿಗೆ ಜೀವದಾನ ನೀಡಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್‌ ತಮ್ಮ ಟ್ವಿಟ್ಟರ್‌ ನಲ್ಲಿ ಹಾಕಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror