ಬೆಂಗಳೂರು ಗ್ರಾಮಾಂತರ ಗಂಗೊಂಡನ ಹಳ್ಳಿಯ ಯುವಕ ದೀಪಕ್ ಎಂಬವರು ಸೆ.25 ರಂದು ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು.ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೀಪಕ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಅವರ ಮೆದುಳು ನಿಷ್ಕ್ರಿಯಗೊಂಡಿದೆ (Brain dead) ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಆತನ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
26 ವರ್ಷದ ಯುವಕ ದೀಪಕ್ ಚಲಾಯಿಸುತ್ತಿದ್ದ ಕಾರು ನಿಂತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು. ಈ ದುರಂತದಲ್ಲಿ ದೀಪಕ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಚಿಕಿತ್ಸೆ ಬಳಿಕವೂ ದೀಪಕ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಹಿನ್ನೆಲೆ ಆರ್.ಆರ್. ನಗರದಲ್ಲಿರುವ ಸ್ಪರ್ಷ ಆಸ್ಪತ್ರೆ ವೈದ್ಯರು ಬ್ರೈನ್ ಡೆಡ್ ಎಂದು ಘೋಷಣೆ ಮಾಡಿದ್ದರು. ಮೆದುಳು ನಿಷ್ಕ್ರಿಯ ಹಿನ್ನೆಲೆ ಕುಟುಂಬಸ್ಥರು ಆತನ ಅಂಗಾಂಗಳನ್ನು ದಾನ ಮಾಡಿದ್ದಾರೆ. ಮೃತನ ಕಿಡ್ನಿ, ಕಣ್ಣು, ಸೇರಿದಂತೆ ಹಲವು ಅಂಗಾಂಗಳನ್ನು ದಾನ ಮಾಡಿದ್ದಾರೆ.
ಯುವಕ ದೀಪಕ್ ಅವರ ದೇಹದಿಂದ ಯಕೃತ್ತು, ಕಿಡ್ನಿ, ಹೃದಯದ ಕವಾಟ, ಕಾರ್ನಿಯಾ ಹಾಗೂ ಚರ್ಮವನ್ನು ಕಸಿ ಮಾಡಲಾಗಿದ್ದು, ಅನೇಕರಿಗೆ ಜೀವದಾನ ನೀಡಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಮ್ಮ ಟ್ವಿಟ್ಟರ್ ನಲ್ಲಿ ಹಾಕಿದ್ದಾರೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…