ಬೆಂಗಳೂರು ಗ್ರಾಮಾಂತರ ಗಂಗೊಂಡನ ಹಳ್ಳಿಯ ಯುವಕ ದೀಪಕ್ ಎಂಬವರು ಸೆ.25 ರಂದು ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು.ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೀಪಕ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಅವರ ಮೆದುಳು ನಿಷ್ಕ್ರಿಯಗೊಂಡಿದೆ (Brain dead) ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಆತನ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
26 ವರ್ಷದ ಯುವಕ ದೀಪಕ್ ಚಲಾಯಿಸುತ್ತಿದ್ದ ಕಾರು ನಿಂತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು. ಈ ದುರಂತದಲ್ಲಿ ದೀಪಕ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಚಿಕಿತ್ಸೆ ಬಳಿಕವೂ ದೀಪಕ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಹಿನ್ನೆಲೆ ಆರ್.ಆರ್. ನಗರದಲ್ಲಿರುವ ಸ್ಪರ್ಷ ಆಸ್ಪತ್ರೆ ವೈದ್ಯರು ಬ್ರೈನ್ ಡೆಡ್ ಎಂದು ಘೋಷಣೆ ಮಾಡಿದ್ದರು. ಮೆದುಳು ನಿಷ್ಕ್ರಿಯ ಹಿನ್ನೆಲೆ ಕುಟುಂಬಸ್ಥರು ಆತನ ಅಂಗಾಂಗಳನ್ನು ದಾನ ಮಾಡಿದ್ದಾರೆ. ಮೃತನ ಕಿಡ್ನಿ, ಕಣ್ಣು, ಸೇರಿದಂತೆ ಹಲವು ಅಂಗಾಂಗಳನ್ನು ದಾನ ಮಾಡಿದ್ದಾರೆ.
ಯುವಕ ದೀಪಕ್ ಅವರ ದೇಹದಿಂದ ಯಕೃತ್ತು, ಕಿಡ್ನಿ, ಹೃದಯದ ಕವಾಟ, ಕಾರ್ನಿಯಾ ಹಾಗೂ ಚರ್ಮವನ್ನು ಕಸಿ ಮಾಡಲಾಗಿದ್ದು, ಅನೇಕರಿಗೆ ಜೀವದಾನ ನೀಡಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಮ್ಮ ಟ್ವಿಟ್ಟರ್ ನಲ್ಲಿ ಹಾಕಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…