ಮೂರು ಹಾವುಗಳೊಂದಿಗೆ ಆಟ ಆಡುತ್ತಿದ್ದ ಯುವಕ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದ. 3 ಸಾವಿರಕ್ಕೂ ಅಧಿಕ ಹಾವುಗಳ ರಕ್ಷಣೆ ಕೂಡ ಮಾಡಿದ್ದಾನೆ. ಆದರೆ ಈ ಬಾರಿ ಹಾವುಗಳ ಜೊತೆ ಸರಸವಾಡಿದ್ದಾನೆ. ಆಕಸ್ಮಿಕವಾಗಿ ಹಾವು ಕಚ್ಚಿದೆ.
ಶಿರಸಿಯ ಉರಗ ಪ್ರೇಮಿ ಮಾಝ್ ಸಯೀದ್ (20) ಹಾವಿನ ಕಡಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಯುವಕ. ದೇವಿಕೆರೆ ಕಾಡಿನಲ್ಲಿ ಈ ಘಟನೆ ಜರುಗಿದೆ. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 3 ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾನೆ. ವಿಡಿಯೋದಲ್ಲಿ ಕಾಣುವಂತೆ 3 ಹಾವುಗಳೊಂದಿಗೆ ಆಟ ಆಡುವಾಗ ಒಂದು ಹಾವು ಈತನ ಕಾಲಿಗೆ ಕಚ್ಚಿದೆ. ಘಟನೆ ಸಂಬಂಧ ಐಎಫ್ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಟ್ವೀಟ್ ಮಾಡಿದ್ದಾರೆ. ಈ ರೀತಿ ಹಾವುಗಳ ಜೊತೆ ಆಟವಾಡಬಾರದು ಎಂದು ಎಚ್ಚರಿಸಿದ್ದಾರೆ.
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…