ಮೂರು ಹಾವುಗಳೊಂದಿಗೆ ಆಟ ಆಡುತ್ತಿದ್ದ ಯುವಕ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದ. 3 ಸಾವಿರಕ್ಕೂ ಅಧಿಕ ಹಾವುಗಳ ರಕ್ಷಣೆ ಕೂಡ ಮಾಡಿದ್ದಾನೆ. ಆದರೆ ಈ ಬಾರಿ ಹಾವುಗಳ ಜೊತೆ ಸರಸವಾಡಿದ್ದಾನೆ. ಆಕಸ್ಮಿಕವಾಗಿ ಹಾವು ಕಚ್ಚಿದೆ.
ಶಿರಸಿಯ ಉರಗ ಪ್ರೇಮಿ ಮಾಝ್ ಸಯೀದ್ (20) ಹಾವಿನ ಕಡಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಯುವಕ. ದೇವಿಕೆರೆ ಕಾಡಿನಲ್ಲಿ ಈ ಘಟನೆ ಜರುಗಿದೆ. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 3 ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾನೆ. ವಿಡಿಯೋದಲ್ಲಿ ಕಾಣುವಂತೆ 3 ಹಾವುಗಳೊಂದಿಗೆ ಆಟ ಆಡುವಾಗ ಒಂದು ಹಾವು ಈತನ ಕಾಲಿಗೆ ಕಚ್ಚಿದೆ. ಘಟನೆ ಸಂಬಂಧ ಐಎಫ್ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಟ್ವೀಟ್ ಮಾಡಿದ್ದಾರೆ. ಈ ರೀತಿ ಹಾವುಗಳ ಜೊತೆ ಆಟವಾಡಬಾರದು ಎಂದು ಎಚ್ಚರಿಸಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…