ಮೂರು ಹಾವುಗಳೊಂದಿಗೆ ಆಟ ಆಡುತ್ತಿದ್ದ ಯುವಕ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದ. 3 ಸಾವಿರಕ್ಕೂ ಅಧಿಕ ಹಾವುಗಳ ರಕ್ಷಣೆ ಕೂಡ ಮಾಡಿದ್ದಾನೆ. ಆದರೆ ಈ ಬಾರಿ ಹಾವುಗಳ ಜೊತೆ ಸರಸವಾಡಿದ್ದಾನೆ. ಆಕಸ್ಮಿಕವಾಗಿ ಹಾವು ಕಚ್ಚಿದೆ.
ಶಿರಸಿಯ ಉರಗ ಪ್ರೇಮಿ ಮಾಝ್ ಸಯೀದ್ (20) ಹಾವಿನ ಕಡಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಯುವಕ. ದೇವಿಕೆರೆ ಕಾಡಿನಲ್ಲಿ ಈ ಘಟನೆ ಜರುಗಿದೆ. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 3 ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾನೆ. ವಿಡಿಯೋದಲ್ಲಿ ಕಾಣುವಂತೆ 3 ಹಾವುಗಳೊಂದಿಗೆ ಆಟ ಆಡುವಾಗ ಒಂದು ಹಾವು ಈತನ ಕಾಲಿಗೆ ಕಚ್ಚಿದೆ. ಘಟನೆ ಸಂಬಂಧ ಐಎಫ್ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಟ್ವೀಟ್ ಮಾಡಿದ್ದಾರೆ. ಈ ರೀತಿ ಹಾವುಗಳ ಜೊತೆ ಆಟವಾಡಬಾರದು ಎಂದು ಎಚ್ಚರಿಸಿದ್ದಾರೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…