ಹದಗೆಟ್ಟ ಮಂಗಳೂರಿನ ರಸ್ತೆ | ComeBackModi ಫಲಕ ಹಿಡಿದು ಏಕಾಂಗಿಯಾಗಿ ಪ್ರತಿಭಟಿಸಿದ ಯುವಕ |

September 29, 2022
7:21 PM

ರಾಷ್ಟ್ರೀಯ ಹೆದ್ದಾರಿ 75 ರಸ್ತೆಯ ದುಃಸ್ಥಿತಿಗೆ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮಂಗಳೂರು (Mangalore) ನಗರದ ನಂತೂರು ವೃತ್ತದಲ್ಲಿ  ಯುವಕನೊಬ್ಬ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಪುತ್ತೂರಿನ ಲಿಖಿತ್ ರೈ ಎಂಬ ಯುವಕ ‘ಕಮ್ ಬ್ಯಾಕ್ ಮೋದಿ, ರೋಡ್ ವರ್ಕ್ ಸೀರ್ಫ್ ಮೋದಿ ಹೈ ತೋ ಮುಮ್ಕೀನ್ ಹೈ. ಪಾಟ್ ಹೋಲ್ ಸೇ ಆಜಾದಿ, ವಿ ಡಿಮ್ಯಾಂಡ್ ಸೇಫ್ ರೋಡ್ಸ್ ಎಂಬ ಫಲಕ ಹಿಡಿದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ.

Advertisement
Advertisement

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು. ಈ ಸಂದರ್ಭ ಆಡಳಿತವು ಶೀಘ್ರವಾಗಿ ರಸ್ತೆ ಕಾಮಗಾರಿಯನ್ನು ಕೈಗೊಂಡಿತ್ತು. ಆದರೆ ಮೋದಿಯವರು  ತೆರಳಿದ  ಕೆಲವೇ ದಿನಗಳಲ್ಲಿ ಮತ್ತೆ ಗುಂಡಿ ಬಿದ್ದಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡಾ ಆಗಿದೆ. ಅದಾದ ಬಳಿಕ ಮತ್ತೆ ದುರಸ್ತಿ ಮಾಡಲಾಗಿದೆ. ಆದರೆ ರಸ್ತೆ ಹದಗೆಟ್ಟ ಸ್ಥಿತಿ ಇನ್ನೂ ಹಲವು ಕಡೆ ಇದೆ. ಇದಕ್ಕಾಗಿ  ನರೇಂದ್ರ ಮೋದಿಯವರು ಮತ್ತೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುವಂತೆ ಲಿಖಿತ್ ಮನವಿ ಮಾಡಿದ್ದಾರೆ. ಇದಕ್ಕಾಗಿ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಜಂಕ್ಷನ್ ನಂತೂರಿನಲ್ಲಿ ಅವರು ಒಂದು ಗಂಟೆಗಳ ಕಾಲ ಈ ಪ್ರತಿಭಟನೆ ನಡೆಸಿದ್ದರು.

ಇದೇ ಆಗಸ್ಟ್ 5 ರಂದು ಬಿಕರ್ನಕಟ್ಟೆ ಬಳಿ ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಪ್ರಾಣ ಕಳೆದುಕೊಂಡ ತನ್ನ ಕಾಲೇಜು ಸಹಪಾಠಿ ಆತಿಶ್‌ಗೆ ನ್ಯಾಯ ಕೋರಿ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕಚೇರಿ ಎದುರು ಯುವಕ ಲಿಖಿತ್ ರೈ ಪ್ರತಿಭಟನೆ ನಡೆಸಿದ್ದರು. ಅದಾದ ಬಳಿಕ ಮಂಗಳೂರು ಮಹಾನಗರ ಪಾಲಿಕೆ ರಸ್ತೆ ದುರಸ್ತಿಗೆ ಕ್ರಮ ಕೈಗೊಂಡಿತ್ತು. ಇದೀಗ ಮತ್ತೆ ಫಲಕ ಹಿಡಿದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಲಿಖಿತ್‌ ರೈ, ಹೆದ್ದಾರಿಯಲ್ಲಿ ಹಲವಾರು ಅಪಘಾತಗಳು ನಡೆಯುತ್ತಿವೆ. ರಸ್ತೆ ತೆರಿಗೆ ಕಟ್ಟುತ್ತಿರುವ ಪ್ರಯಾಣಿಕರಿಗೆ ಉತ್ತಮ ರಸ್ತೆ ಕಲ್ಪಿಸಲು ಚುನಾಯಿತ ಪ್ರತಿನಿಧಿಗಳು ಮುಂದಾಗಬೇಕು ಎಂದು ಆಗ್ರಹಿಸುತ್ತೇವೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಸ್ತೆಗಳನ್ನು ದುರಸ್ತಿ ಮಾಡಲಾಗಿತ್ತು. ಈಗ ರಸ್ತೆಗಳ ದಯನೀಯ ಸ್ಥಿತಿಯನ್ನು ತಿಳಿಯಲು ಪ್ರಧಾನಿಯವರು ಸಕಲೇಶಪುರದಿಂದ ಮಂಗಳೂರಿಗೆ ರಸ್ತೆ ಮಾರ್ಗವಾಗಿ ಪ್ರಯಾಣಿಸಬೇಕು ಎಂದರು. ಅಧಿಕಾರಿಗಳು ಹೆದ್ದಾರಿ ರಸ್ತೆಗಳಲ್ಲಿ ಸರಿಯಾದ ಬೀದಿ ದೀಪಗಳನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |
June 2, 2025
2:15 PM
by: The Rural Mirror ಸುದ್ದಿಜಾಲ
ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ
June 2, 2025
11:20 AM
by: The Rural Mirror ಸುದ್ದಿಜಾಲ
ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ
June 2, 2025
7:33 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
June 2, 2025
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group