Advertisement
ರಾಜ್ಯ

ಹದಗೆಟ್ಟ ಮಂಗಳೂರಿನ ರಸ್ತೆ | ComeBackModi ಫಲಕ ಹಿಡಿದು ಏಕಾಂಗಿಯಾಗಿ ಪ್ರತಿಭಟಿಸಿದ ಯುವಕ |

Share

ರಾಷ್ಟ್ರೀಯ ಹೆದ್ದಾರಿ 75 ರಸ್ತೆಯ ದುಃಸ್ಥಿತಿಗೆ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮಂಗಳೂರು (Mangalore) ನಗರದ ನಂತೂರು ವೃತ್ತದಲ್ಲಿ  ಯುವಕನೊಬ್ಬ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಪುತ್ತೂರಿನ ಲಿಖಿತ್ ರೈ ಎಂಬ ಯುವಕ ‘ಕಮ್ ಬ್ಯಾಕ್ ಮೋದಿ, ರೋಡ್ ವರ್ಕ್ ಸೀರ್ಫ್ ಮೋದಿ ಹೈ ತೋ ಮುಮ್ಕೀನ್ ಹೈ. ಪಾಟ್ ಹೋಲ್ ಸೇ ಆಜಾದಿ, ವಿ ಡಿಮ್ಯಾಂಡ್ ಸೇಫ್ ರೋಡ್ಸ್ ಎಂಬ ಫಲಕ ಹಿಡಿದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ.

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು. ಈ ಸಂದರ್ಭ ಆಡಳಿತವು ಶೀಘ್ರವಾಗಿ ರಸ್ತೆ ಕಾಮಗಾರಿಯನ್ನು ಕೈಗೊಂಡಿತ್ತು. ಆದರೆ ಮೋದಿಯವರು  ತೆರಳಿದ  ಕೆಲವೇ ದಿನಗಳಲ್ಲಿ ಮತ್ತೆ ಗುಂಡಿ ಬಿದ್ದಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡಾ ಆಗಿದೆ. ಅದಾದ ಬಳಿಕ ಮತ್ತೆ ದುರಸ್ತಿ ಮಾಡಲಾಗಿದೆ. ಆದರೆ ರಸ್ತೆ ಹದಗೆಟ್ಟ ಸ್ಥಿತಿ ಇನ್ನೂ ಹಲವು ಕಡೆ ಇದೆ. ಇದಕ್ಕಾಗಿ  ನರೇಂದ್ರ ಮೋದಿಯವರು ಮತ್ತೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುವಂತೆ ಲಿಖಿತ್ ಮನವಿ ಮಾಡಿದ್ದಾರೆ. ಇದಕ್ಕಾಗಿ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಜಂಕ್ಷನ್ ನಂತೂರಿನಲ್ಲಿ ಅವರು ಒಂದು ಗಂಟೆಗಳ ಕಾಲ ಈ ಪ್ರತಿಭಟನೆ ನಡೆಸಿದ್ದರು.

ಇದೇ ಆಗಸ್ಟ್ 5 ರಂದು ಬಿಕರ್ನಕಟ್ಟೆ ಬಳಿ ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಪ್ರಾಣ ಕಳೆದುಕೊಂಡ ತನ್ನ ಕಾಲೇಜು ಸಹಪಾಠಿ ಆತಿಶ್‌ಗೆ ನ್ಯಾಯ ಕೋರಿ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕಚೇರಿ ಎದುರು ಯುವಕ ಲಿಖಿತ್ ರೈ ಪ್ರತಿಭಟನೆ ನಡೆಸಿದ್ದರು. ಅದಾದ ಬಳಿಕ ಮಂಗಳೂರು ಮಹಾನಗರ ಪಾಲಿಕೆ ರಸ್ತೆ ದುರಸ್ತಿಗೆ ಕ್ರಮ ಕೈಗೊಂಡಿತ್ತು. ಇದೀಗ ಮತ್ತೆ ಫಲಕ ಹಿಡಿದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಲಿಖಿತ್‌ ರೈ, ಹೆದ್ದಾರಿಯಲ್ಲಿ ಹಲವಾರು ಅಪಘಾತಗಳು ನಡೆಯುತ್ತಿವೆ. ರಸ್ತೆ ತೆರಿಗೆ ಕಟ್ಟುತ್ತಿರುವ ಪ್ರಯಾಣಿಕರಿಗೆ ಉತ್ತಮ ರಸ್ತೆ ಕಲ್ಪಿಸಲು ಚುನಾಯಿತ ಪ್ರತಿನಿಧಿಗಳು ಮುಂದಾಗಬೇಕು ಎಂದು ಆಗ್ರಹಿಸುತ್ತೇವೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಸ್ತೆಗಳನ್ನು ದುರಸ್ತಿ ಮಾಡಲಾಗಿತ್ತು. ಈಗ ರಸ್ತೆಗಳ ದಯನೀಯ ಸ್ಥಿತಿಯನ್ನು ತಿಳಿಯಲು ಪ್ರಧಾನಿಯವರು ಸಕಲೇಶಪುರದಿಂದ ಮಂಗಳೂರಿಗೆ ರಸ್ತೆ ಮಾರ್ಗವಾಗಿ ಪ್ರಯಾಣಿಸಬೇಕು ಎಂದರು. ಅಧಿಕಾರಿಗಳು ಹೆದ್ದಾರಿ ರಸ್ತೆಗಳಲ್ಲಿ ಸರಿಯಾದ ಬೀದಿ ದೀಪಗಳನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

5 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

6 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

6 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

13 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

18 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago