Advertisement
ರಾಜ್ಯ

ಹದಗೆಟ್ಟ ಮಂಗಳೂರಿನ ರಸ್ತೆ | ComeBackModi ಫಲಕ ಹಿಡಿದು ಏಕಾಂಗಿಯಾಗಿ ಪ್ರತಿಭಟಿಸಿದ ಯುವಕ |

Share

ರಾಷ್ಟ್ರೀಯ ಹೆದ್ದಾರಿ 75 ರಸ್ತೆಯ ದುಃಸ್ಥಿತಿಗೆ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮಂಗಳೂರು (Mangalore) ನಗರದ ನಂತೂರು ವೃತ್ತದಲ್ಲಿ  ಯುವಕನೊಬ್ಬ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಪುತ್ತೂರಿನ ಲಿಖಿತ್ ರೈ ಎಂಬ ಯುವಕ ‘ಕಮ್ ಬ್ಯಾಕ್ ಮೋದಿ, ರೋಡ್ ವರ್ಕ್ ಸೀರ್ಫ್ ಮೋದಿ ಹೈ ತೋ ಮುಮ್ಕೀನ್ ಹೈ. ಪಾಟ್ ಹೋಲ್ ಸೇ ಆಜಾದಿ, ವಿ ಡಿಮ್ಯಾಂಡ್ ಸೇಫ್ ರೋಡ್ಸ್ ಎಂಬ ಫಲಕ ಹಿಡಿದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ.

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು. ಈ ಸಂದರ್ಭ ಆಡಳಿತವು ಶೀಘ್ರವಾಗಿ ರಸ್ತೆ ಕಾಮಗಾರಿಯನ್ನು ಕೈಗೊಂಡಿತ್ತು. ಆದರೆ ಮೋದಿಯವರು  ತೆರಳಿದ  ಕೆಲವೇ ದಿನಗಳಲ್ಲಿ ಮತ್ತೆ ಗುಂಡಿ ಬಿದ್ದಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡಾ ಆಗಿದೆ. ಅದಾದ ಬಳಿಕ ಮತ್ತೆ ದುರಸ್ತಿ ಮಾಡಲಾಗಿದೆ. ಆದರೆ ರಸ್ತೆ ಹದಗೆಟ್ಟ ಸ್ಥಿತಿ ಇನ್ನೂ ಹಲವು ಕಡೆ ಇದೆ. ಇದಕ್ಕಾಗಿ  ನರೇಂದ್ರ ಮೋದಿಯವರು ಮತ್ತೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುವಂತೆ ಲಿಖಿತ್ ಮನವಿ ಮಾಡಿದ್ದಾರೆ. ಇದಕ್ಕಾಗಿ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಜಂಕ್ಷನ್ ನಂತೂರಿನಲ್ಲಿ ಅವರು ಒಂದು ಗಂಟೆಗಳ ಕಾಲ ಈ ಪ್ರತಿಭಟನೆ ನಡೆಸಿದ್ದರು.

ಇದೇ ಆಗಸ್ಟ್ 5 ರಂದು ಬಿಕರ್ನಕಟ್ಟೆ ಬಳಿ ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಪ್ರಾಣ ಕಳೆದುಕೊಂಡ ತನ್ನ ಕಾಲೇಜು ಸಹಪಾಠಿ ಆತಿಶ್‌ಗೆ ನ್ಯಾಯ ಕೋರಿ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕಚೇರಿ ಎದುರು ಯುವಕ ಲಿಖಿತ್ ರೈ ಪ್ರತಿಭಟನೆ ನಡೆಸಿದ್ದರು. ಅದಾದ ಬಳಿಕ ಮಂಗಳೂರು ಮಹಾನಗರ ಪಾಲಿಕೆ ರಸ್ತೆ ದುರಸ್ತಿಗೆ ಕ್ರಮ ಕೈಗೊಂಡಿತ್ತು. ಇದೀಗ ಮತ್ತೆ ಫಲಕ ಹಿಡಿದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಲಿಖಿತ್‌ ರೈ, ಹೆದ್ದಾರಿಯಲ್ಲಿ ಹಲವಾರು ಅಪಘಾತಗಳು ನಡೆಯುತ್ತಿವೆ. ರಸ್ತೆ ತೆರಿಗೆ ಕಟ್ಟುತ್ತಿರುವ ಪ್ರಯಾಣಿಕರಿಗೆ ಉತ್ತಮ ರಸ್ತೆ ಕಲ್ಪಿಸಲು ಚುನಾಯಿತ ಪ್ರತಿನಿಧಿಗಳು ಮುಂದಾಗಬೇಕು ಎಂದು ಆಗ್ರಹಿಸುತ್ತೇವೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಸ್ತೆಗಳನ್ನು ದುರಸ್ತಿ ಮಾಡಲಾಗಿತ್ತು. ಈಗ ರಸ್ತೆಗಳ ದಯನೀಯ ಸ್ಥಿತಿಯನ್ನು ತಿಳಿಯಲು ಪ್ರಧಾನಿಯವರು ಸಕಲೇಶಪುರದಿಂದ ಮಂಗಳೂರಿಗೆ ರಸ್ತೆ ಮಾರ್ಗವಾಗಿ ಪ್ರಯಾಣಿಸಬೇಕು ಎಂದರು. ಅಧಿಕಾರಿಗಳು ಹೆದ್ದಾರಿ ರಸ್ತೆಗಳಲ್ಲಿ ಸರಿಯಾದ ಬೀದಿ ದೀಪಗಳನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

8 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

8 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

8 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

13 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago