ಕೃಷಿ ಕ್ಷೇತ್ರದತ್ತ ಯುವಕರ ಆಕರ್ಷಣೆಗೆ ತಂತ್ರಜ್ಞಾನದ ಬಳಕೆ ಅಗತ್ಯ

December 4, 2024
6:17 AM

ಕೃಷಿಯಲ್ಲಿ  ತಂತ್ರಜ್ಞಾನವನ್ನು ಅಗತ್ಯಕ್ಕೆ  ತಕ್ಕಂತೆ  ಬಳಸಿಕೊಳ್ಳುವ ಮೂಲಕ ಅದರ ಪ್ರಯೋಜನ  ರೈತರಿಗೆ  ಸಿಗುವಂತೆ ನೋಡಿಕೊಳ್ಳಬೇಕು. ಜೊತೆಗೆ ಕೃಷಿ ಕ್ಷೇತ್ರದತ್ತ  ಯುವಕರನ್ನು ಆಕರ್ಷಿಸುವ ಕೆಲಸ ಆಗಬೇಕಾಗಿದೆ. ಕೃಷಿ ವಲಯದಲ್ಲಿ ತೊಡಗಿಸಿಕೊಂಡಿರುವ ನವೋದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಕೃಷಿ ಸಚಿವ  ಚೆಲುವರಾಯಸ್ವಾಮಿ ಹೇಳಿದರು.

ಬೆಂಗಳೂರಿನ  ಕೃಷಿ  ವಿಶ್ವವಿದ್ಯಾಲಯದ ವತಿಯಿಂದ  ಜಿಕೆವಿಕೆಯಲ್ಲಿ ಅಗ್ರಿಕಲ್ಚರ್ ಫ್ಯೂಚರ್, startup conclave ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ನವೋದ್ಯಮಗಳಿಗೆ ಹೆಚ್ಚಿನ ಉತ್ತೇಜನ ನೀಡಲು  ಮುಂದಾಗಿದೆ. ಈ ಸಂಬಂಧ  ಮುಂಬರುವ ಬಜೆಟ್ ನಲ್ಲೂ ಕೂಡ  ಅನುದಾನ ಹೆಚ್ಚು  ನೀಡುವಂತೆ ಮುಖ್ಯಮಂತ್ರಿಗಳೊಂದಿಗೆ  ಸಮಾಲೋಚಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ಕೃಷಿಗೆ ಸಂಬಂಧಿಸಿದ ಡ್ರೋನ್ ಗಳು ,  ಬಿತ್ತನೆ ಬೀಜ,  ರಸಗೊಬ್ಬರ  ಸೇರಿದಂತೆ ವಿವಿಧ ಪ್ರಾತ್ಯಕ್ಷಿಕೆ ಮತ್ತು ಮಳಿಗೆಗಳನ್ನು ವೀಕ್ಷಿಸಿದ ಸಚಿವರು  ಸಂಬಂಧಪಟ್ಟವರಿಂದ ಮಾಹಿತಿ  ಪಡೆದುಕೊಂಡರು. ವಿವಿಧ ಆವಿಷ್ಕಾರಗಳ ಕುರಿತ ಕಾಫಿಟೇಬಲ್ ಪುಸ್ತಕ ಬಿಡುಗಡೆ ಮಾಡಿದರು.

ಈ ವೇಳೆ  ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ, ಸೇರಿದಂತೆ  ಹಲವರು  ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror