ಕೃಷಿ ಕ್ಷೇತ್ರದತ್ತ ಯುವಕರ ಆಕರ್ಷಣೆಗೆ ತಂತ್ರಜ್ಞಾನದ ಬಳಕೆ ಅಗತ್ಯ

December 4, 2024
6:17 AM

ಕೃಷಿಯಲ್ಲಿ  ತಂತ್ರಜ್ಞಾನವನ್ನು ಅಗತ್ಯಕ್ಕೆ  ತಕ್ಕಂತೆ  ಬಳಸಿಕೊಳ್ಳುವ ಮೂಲಕ ಅದರ ಪ್ರಯೋಜನ  ರೈತರಿಗೆ  ಸಿಗುವಂತೆ ನೋಡಿಕೊಳ್ಳಬೇಕು. ಜೊತೆಗೆ ಕೃಷಿ ಕ್ಷೇತ್ರದತ್ತ  ಯುವಕರನ್ನು ಆಕರ್ಷಿಸುವ ಕೆಲಸ ಆಗಬೇಕಾಗಿದೆ. ಕೃಷಿ ವಲಯದಲ್ಲಿ ತೊಡಗಿಸಿಕೊಂಡಿರುವ ನವೋದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಕೃಷಿ ಸಚಿವ  ಚೆಲುವರಾಯಸ್ವಾಮಿ ಹೇಳಿದರು.

ಬೆಂಗಳೂರಿನ  ಕೃಷಿ  ವಿಶ್ವವಿದ್ಯಾಲಯದ ವತಿಯಿಂದ  ಜಿಕೆವಿಕೆಯಲ್ಲಿ ಅಗ್ರಿಕಲ್ಚರ್ ಫ್ಯೂಚರ್, startup conclave ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ನವೋದ್ಯಮಗಳಿಗೆ ಹೆಚ್ಚಿನ ಉತ್ತೇಜನ ನೀಡಲು  ಮುಂದಾಗಿದೆ. ಈ ಸಂಬಂಧ  ಮುಂಬರುವ ಬಜೆಟ್ ನಲ್ಲೂ ಕೂಡ  ಅನುದಾನ ಹೆಚ್ಚು  ನೀಡುವಂತೆ ಮುಖ್ಯಮಂತ್ರಿಗಳೊಂದಿಗೆ  ಸಮಾಲೋಚಿಸಲಾಗಿದೆ ಎಂದು ತಿಳಿಸಿದರು.

Advertisement

ಈ ಸಂದರ್ಭದಲ್ಲಿ  ಕೃಷಿಗೆ ಸಂಬಂಧಿಸಿದ ಡ್ರೋನ್ ಗಳು ,  ಬಿತ್ತನೆ ಬೀಜ,  ರಸಗೊಬ್ಬರ  ಸೇರಿದಂತೆ ವಿವಿಧ ಪ್ರಾತ್ಯಕ್ಷಿಕೆ ಮತ್ತು ಮಳಿಗೆಗಳನ್ನು ವೀಕ್ಷಿಸಿದ ಸಚಿವರು  ಸಂಬಂಧಪಟ್ಟವರಿಂದ ಮಾಹಿತಿ  ಪಡೆದುಕೊಂಡರು. ವಿವಿಧ ಆವಿಷ್ಕಾರಗಳ ಕುರಿತ ಕಾಫಿಟೇಬಲ್ ಪುಸ್ತಕ ಬಿಡುಗಡೆ ಮಾಡಿದರು.

ಈ ವೇಳೆ  ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ, ಸೇರಿದಂತೆ  ಹಲವರು  ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror