Advertisement
MIRROR FOCUS

ಕೃಷಿ ಕ್ಷೇತ್ರದತ್ತ ಯುವಕರ ಆಕರ್ಷಣೆಗೆ ತಂತ್ರಜ್ಞಾನದ ಬಳಕೆ ಅಗತ್ಯ

Share

ಕೃಷಿಯಲ್ಲಿ  ತಂತ್ರಜ್ಞಾನವನ್ನು ಅಗತ್ಯಕ್ಕೆ  ತಕ್ಕಂತೆ  ಬಳಸಿಕೊಳ್ಳುವ ಮೂಲಕ ಅದರ ಪ್ರಯೋಜನ  ರೈತರಿಗೆ  ಸಿಗುವಂತೆ ನೋಡಿಕೊಳ್ಳಬೇಕು. ಜೊತೆಗೆ ಕೃಷಿ ಕ್ಷೇತ್ರದತ್ತ  ಯುವಕರನ್ನು ಆಕರ್ಷಿಸುವ ಕೆಲಸ ಆಗಬೇಕಾಗಿದೆ. ಕೃಷಿ ವಲಯದಲ್ಲಿ ತೊಡಗಿಸಿಕೊಂಡಿರುವ ನವೋದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಕೃಷಿ ಸಚಿವ  ಚೆಲುವರಾಯಸ್ವಾಮಿ ಹೇಳಿದರು.

ಬೆಂಗಳೂರಿನ  ಕೃಷಿ  ವಿಶ್ವವಿದ್ಯಾಲಯದ ವತಿಯಿಂದ  ಜಿಕೆವಿಕೆಯಲ್ಲಿ ಅಗ್ರಿಕಲ್ಚರ್ ಫ್ಯೂಚರ್, startup conclave ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ನವೋದ್ಯಮಗಳಿಗೆ ಹೆಚ್ಚಿನ ಉತ್ತೇಜನ ನೀಡಲು  ಮುಂದಾಗಿದೆ. ಈ ಸಂಬಂಧ  ಮುಂಬರುವ ಬಜೆಟ್ ನಲ್ಲೂ ಕೂಡ  ಅನುದಾನ ಹೆಚ್ಚು  ನೀಡುವಂತೆ ಮುಖ್ಯಮಂತ್ರಿಗಳೊಂದಿಗೆ  ಸಮಾಲೋಚಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ಕೃಷಿಗೆ ಸಂಬಂಧಿಸಿದ ಡ್ರೋನ್ ಗಳು ,  ಬಿತ್ತನೆ ಬೀಜ,  ರಸಗೊಬ್ಬರ  ಸೇರಿದಂತೆ ವಿವಿಧ ಪ್ರಾತ್ಯಕ್ಷಿಕೆ ಮತ್ತು ಮಳಿಗೆಗಳನ್ನು ವೀಕ್ಷಿಸಿದ ಸಚಿವರು  ಸಂಬಂಧಪಟ್ಟವರಿಂದ ಮಾಹಿತಿ  ಪಡೆದುಕೊಂಡರು. ವಿವಿಧ ಆವಿಷ್ಕಾರಗಳ ಕುರಿತ ಕಾಫಿಟೇಬಲ್ ಪುಸ್ತಕ ಬಿಡುಗಡೆ ಮಾಡಿದರು.

ಈ ವೇಳೆ  ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ, ಸೇರಿದಂತೆ  ಹಲವರು  ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 hour ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

2 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

17 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago