ಕೃಷಿಯಲ್ಲಿ ತಂತ್ರಜ್ಞಾನವನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳುವ ಮೂಲಕ ಅದರ ಪ್ರಯೋಜನ ರೈತರಿಗೆ ಸಿಗುವಂತೆ ನೋಡಿಕೊಳ್ಳಬೇಕು. ಜೊತೆಗೆ ಕೃಷಿ ಕ್ಷೇತ್ರದತ್ತ ಯುವಕರನ್ನು ಆಕರ್ಷಿಸುವ ಕೆಲಸ ಆಗಬೇಕಾಗಿದೆ. ಕೃಷಿ ವಲಯದಲ್ಲಿ ತೊಡಗಿಸಿಕೊಂಡಿರುವ ನವೋದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.
ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಜಿಕೆವಿಕೆಯಲ್ಲಿ ಅಗ್ರಿಕಲ್ಚರ್ ಫ್ಯೂಚರ್, startup conclave ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ನವೋದ್ಯಮಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಮುಂದಾಗಿದೆ. ಈ ಸಂಬಂಧ ಮುಂಬರುವ ಬಜೆಟ್ ನಲ್ಲೂ ಕೂಡ ಅನುದಾನ ಹೆಚ್ಚು ನೀಡುವಂತೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೃಷಿಗೆ ಸಂಬಂಧಿಸಿದ ಡ್ರೋನ್ ಗಳು , ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ವಿವಿಧ ಪ್ರಾತ್ಯಕ್ಷಿಕೆ ಮತ್ತು ಮಳಿಗೆಗಳನ್ನು ವೀಕ್ಷಿಸಿದ ಸಚಿವರು ಸಂಬಂಧಪಟ್ಟವರಿಂದ ಮಾಹಿತಿ ಪಡೆದುಕೊಂಡರು. ವಿವಿಧ ಆವಿಷ್ಕಾರಗಳ ಕುರಿತ ಕಾಫಿಟೇಬಲ್ ಪುಸ್ತಕ ಬಿಡುಗಡೆ ಮಾಡಿದರು.
ಈ ವೇಳೆ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…