ಸ್ವಚ್ಛತಾ ಅಭಿಯಾನದ ನಡುವೆ ರಸ್ತೆ ಜಾಗೃತಿಯ ಕೆಲಸ ಮಾಡಿದ ಯುವಕರು | ಇಲಾಖೆ ಗಮನಿಸಬೇಕಾದ ಪ್ರದೇಶ ಇದು..! |

October 2, 2023
6:43 PM
ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯ ದೇವಸ್ಯ ಎಂಬಲ್ಲಿ ರಸ್ತೆ ಕುಸಿಯುವ ಭೀತಿಯ ಪ್ರದೇಶ ಎಂದು ಕಮಿಲದ ಬಾಂಧವ್ಯ ಗೆಳೆಯರ ಬಳಗದ ಯುವಕರ ತಂಡ ಎಚ್ಚರಿಕೆಗಾಗಿ ರಸ್ತೆ ಬದಿ ರಿಬ್ಬನ್‌ ಅಳವಡಿಸಿದರು.

ಗಾಂಧಿಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ ಹಾಗೂ ಜಾಗೃತಿ ಅಭಿಯಾನ ಗುತ್ತಿಗಾರಿನಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭ ಕಮಿಲದಿಂದ ಗುತ್ತಿಗಾರುವರೆಗೆ ಸ್ವಚ್ಛತಾ ಅಭಿಯಾನದಲ್ಲಿ ಕಮಿಲದ ಬಾಂಧವ್ಯ ಗೆಳೆಯರ ಬಳಗ ಹಾಗೂ ಸ್ಥಳೀಯ ಗ್ರಾಪಂ ಸದಸ್ಯರು ಹಾಗೂ ಸಾರ್ವಜನಿಕರು ಜೊತೆಯಾಗಿದ್ದರು.

Advertisement

ಈ ವೇಳೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ  ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯ ದೇವಸ್ಯ ಎಂಬಲ್ಲಿ ರಸ್ತೆ ಕುಸಿಯುವ ಭೀತಿಯ ಪ್ರದೇಶ ಎಂದು ಯುವಕರ ತಂಡ ಎಚ್ಚರಿಕೆಗಾಗಿ ರಿಬ್ಬನ್‌ ಅಳವಡಿಸಿದರು. ಇದು ಲೋಕೋಪಯೋಗಿ ಇಲಾಖೆಯ ಅಧೀನದ ರಸ್ತೆಯಾಗಿದ್ದು, ಈಗ ರಸ್ತೆ ಬದಿ ಕುಸಿಯುವ ಭೀತಿ ಇದ್ದು ಈಗಾಗಲೇ ಕೆಲವು ವಾಹನಗಳು ಸೈಡ್‌ ಕೊಡುವ ವೇಳೆ ಚರಂಡಿ ಬಿದ್ದ ಘಟನೆ ನಡೆದಿದೆ. ಇಲ್ಲಿ ವಾಹನಗಳು ಸೈಡ್‌ ಕೊಡಲೂ ಪರದಾಟ ನಡೆಸಬೇಕಾದ ಸ್ಥಿತಿ ಇತ್ತು. ಇದಕ್ಕಾಗಿ ಚರಂಡಿಗೆ ತಡೆಗೋಡೆ ಇಲ್ಲಿ ಅಗತ್ಯ ಇದೆ. ಲೋಕೋಪಯೋಗಿ ಇಲಾಖೆ ಸೇರಿದಂತೆ ಸಂಬಂಧಿತರು ಈ ಕಡೆ ಗಮನಹರಿಸಬೇಕಿದೆ. ಸದ್ಯ ಯುವಕರು ಎಚ್ಚರಿಕೆಗಾಗಿ ರಿಬ್ಬನ್‌ ಅಳವಡಿಕೆ ಕೆಲಸ ಮಾಡಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror