ಗಾಂಧಿಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ ಹಾಗೂ ಜಾಗೃತಿ ಅಭಿಯಾನ ಗುತ್ತಿಗಾರಿನಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭ ಕಮಿಲದಿಂದ ಗುತ್ತಿಗಾರುವರೆಗೆ ಸ್ವಚ್ಛತಾ ಅಭಿಯಾನದಲ್ಲಿ ಕಮಿಲದ ಬಾಂಧವ್ಯ ಗೆಳೆಯರ ಬಳಗ ಹಾಗೂ ಸ್ಥಳೀಯ ಗ್ರಾಪಂ ಸದಸ್ಯರು ಹಾಗೂ ಸಾರ್ವಜನಿಕರು ಜೊತೆಯಾಗಿದ್ದರು.
ಈ ವೇಳೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯ ದೇವಸ್ಯ ಎಂಬಲ್ಲಿ ರಸ್ತೆ ಕುಸಿಯುವ ಭೀತಿಯ ಪ್ರದೇಶ ಎಂದು ಯುವಕರ ತಂಡ ಎಚ್ಚರಿಕೆಗಾಗಿ ರಿಬ್ಬನ್ ಅಳವಡಿಸಿದರು. ಇದು ಲೋಕೋಪಯೋಗಿ ಇಲಾಖೆಯ ಅಧೀನದ ರಸ್ತೆಯಾಗಿದ್ದು, ಈಗ ರಸ್ತೆ ಬದಿ ಕುಸಿಯುವ ಭೀತಿ ಇದ್ದು ಈಗಾಗಲೇ ಕೆಲವು ವಾಹನಗಳು ಸೈಡ್ ಕೊಡುವ ವೇಳೆ ಚರಂಡಿ ಬಿದ್ದ ಘಟನೆ ನಡೆದಿದೆ. ಇಲ್ಲಿ ವಾಹನಗಳು ಸೈಡ್ ಕೊಡಲೂ ಪರದಾಟ ನಡೆಸಬೇಕಾದ ಸ್ಥಿತಿ ಇತ್ತು. ಇದಕ್ಕಾಗಿ ಚರಂಡಿಗೆ ತಡೆಗೋಡೆ ಇಲ್ಲಿ ಅಗತ್ಯ ಇದೆ. ಲೋಕೋಪಯೋಗಿ ಇಲಾಖೆ ಸೇರಿದಂತೆ ಸಂಬಂಧಿತರು ಈ ಕಡೆ ಗಮನಹರಿಸಬೇಕಿದೆ. ಸದ್ಯ ಯುವಕರು ಎಚ್ಚರಿಕೆಗಾಗಿ ರಿಬ್ಬನ್ ಅಳವಡಿಕೆ ಕೆಲಸ ಮಾಡಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…